Advertisement

ಐವರು ಮನೆ ಕಳ್ಳರು, ದರೋಡೆಕೋರರ ಬಂಧನ

01:31 PM Jun 07, 2017 | Team Udayavani |

ಬೆಂಗಳೂರು: ಮನೆ ಕಳವು, ದರೋಡೆ ಮತ್ತು ಸರಗಳವು ಮಾಡುತ್ತಿದ್ದ 9 ಆರೋಪಿಗಳನ್ನು ಬಂಧಿಸಿರುವ ದಕ್ಷಿಣ ವಿಭಾಗದ ಪೊಲೀಸರು 34 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಮನೆ ಕಳವು ಮಾಡುತ್ತಿದ್ದ ಭಾರತಿ ನಗರದ ನಯಾಜ್‌ ಖಾನ್‌ (33), ದೇವರಜೀವನಹಳ್ಳಿಯ ಅಪ್ಸರ್‌ (31)ಎಂಬುವವರನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 17 ಲಕ್ಷ ಮೌಲ್ಯದ 550 ಗ್ರಾಂ ಚಿನ್ನಾಭರಣ, ಬೆಳ್ಳಿ ವಸ್ತುಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳು, ಬಾಗಿಲು ತೆರೆದಿರುವ ಮನೆಗಳನ್ನು ಗುರುತಿಸಿಕೊಳ್ಳುತ್ತಿದ್ದರು. ಬಳಿಕ ಬೀಗ ಮುರಿದು ಕಳ್ಳತನ ಮಾಡುತ್ತಿದ್ದರು. ಸುಬ್ರಹ್ಮಣ್ಯಪುರದಲ್ಲಿ ನಡೆದ ಕಳವು ಪ್ರಕರಣವೊಂದರಲ್ಲಿ ಸಂಗ್ರಹಿಸಿದ ಬೆರಳಚ್ಚು ಮಾದರಿಯನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಡಾ ಶರಣಪ್ಪ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮನೆಗಳ್ಳತನ ಮಾಡುತ್ತಿದ್ದ ಜಯನಗರದ ನಿವಾಸಿ ಮುನಿರಾಜು (28)ನನ್ನು  ಕೋಣನಕುಂಟೆ ಪೊಲೀಸರು ಬಂಧಿಸಿದ್ದು, 70ಗ್ರಾಂ ತೂಕದ 3 ಚಿನ್ನದ ಸರಗಳು, 1 ಉಂಗುರ, 1 ಕೆ.ಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಅನ್ನಪೂರ್ಣೇಶ್ವರಿ ಲೇಔಟ್‌ನ ಡಾ. ನಕುಲ… ಎಂಬುವರ ಮನೆಯ ಕಿಟಕಿ ಗ್ರಿಲ… ಮುರಿದು ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೂಂದು ಪ್ರಕರಣದಲ್ಲಿ ಕೆಐಇಟಿ ಪಾಲಿಟೆಕ್ನಿಕ್‌ನ ಉಪನ್ಯಾಸಕರಾದ ಲೋಕೇಶ್‌ ಎಂಬುವರ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ಸರಬಂಟೆ ಪಾಳ್ಯದ ಶಿವಾನಂದ  (35) ಎಂಬಾತನನ್ನು ಕುಮಾರಸ್ವಾಮಿ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಈತನಿಂದ 7.5 ಲಕ್ಷ ಮೌಲ್ಯದ 450 ಗ್ರಾಂ ಚಿನ್ನಾಭರಣ, ಎಲ್‌ಸಿಡಿ ಟಿವಿಯನ್ನು ವಶಪಡಿಸಿಕೊಂಡಿದ್ದಾರೆ. ಮೇ 12 ರಂದು ಲೋಕೇಶ್‌ ಎಂಬುವರು ಕುಟುಂಬ ಸಮೇತ ಕುಕ್ಕೆಸುಬ್ರಹ್ಮಣ್ಯಕ್ಕೆ ಹೋಗಿದ್ದರು. ಈ ವೇಳೆ ಅವರ ಮನೆಯ ಹಿಂಭಾಗದ ಗ್ರಿಲ್‌ ಮುರಿದು ಒಳ ನುಗ್ಗಿದ ಆರೋಪಿ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಸರಗಳ್ಳನ ಬಂಧನ: ಕಳವು ಮಾಡಿದ ಬೈಕ್‌ನಲ್ಲಿ ಸುತ್ತಾಡುತ್ತ ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನದ ಸರಗಳನ್ನು ಕಳವು ಮಾಡುತ್ತಿದ್ದ ಶ್ಯಾಮಣ್ಣ ಗಾರ್ಡನ್‌ನ ಅಬ್ರಾರ್‌ ಪಾಷಾ (28)ಎಂಬಾತನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.

ಈತನಿಂದ 7.20 ಲಕ್ಷ ಮೌಲ್ಯದ 277 ಗ್ರಾಂ ತೂಕದ ಚಿನ್ನದ ಸರಗಳು, ಒಂದು ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಕೆಂಪೇಗೌಡ ನಗರ, ಶಂಕರಪುರ, ಹನುಮಂತನಗರ, ಗಿರಿನಗರ, ಸಿ.ಕೆ.ಅಚ್ಚುಕಟ್ಟು ಪ್ರದೇಶದ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡುತ್ತ ಒಂಟಿ ಮಹಿಳೆಯರನ್ನು ಬೆದರಿಸಿ ಚಿನ್ನದ ಸರಗಳನ್ನು ದೋಚಿ ಪರಾರಿಯಾಗುತ್ತಿದ್ದ. ಆರೋಪಿಯ ಬಂಧನದಿಂದ ಇತರೆ 5 ಪ್ರಕರಣಗಳು ಬೆಳಕಿಗೆ ಬಂದಿವೆ.

ದರೋಡೆಕೋರರ ಬಂಧನ: ರಾತ್ರಿವೇಳೆ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಸುಲಿಗೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ಮೂಕಾಂಬಿಕಾ ನಗರದ ಪ್ರವೀಣ್‌ ಕುಮಾರ್‌ (19), ಕರಿಯಾ (20), ಹರೀಶ್‌(24), ಮಂಜುನಾಥ (19) ಬಂಧಿತರು.

ಆರೋಪಿಗಳು ಶ್ರೀನಗರದ ಸಪ್ತಗಿರಿ ಶಾಲೆಯ ಬಳಿ ಒಂಟಿಯಾಗಿ ಓಡಾಡುವವರನ್ನು ಟಾರ್ಗೆಟ್‌ ಮಾಡಿಕೊಂಡು ಹಣ ಮತ್ತು ಚಿನ್ನಾಭರಣಗಳನ್ನು ಸುಲಿಗೆ ಮಾಡುತ್ತಿದ್ದರು. ಸೋಮವಾರ ರಾತ್ರಿ ಡಕಾಯಿತಿಗೆ ಹೊಂಚು ಹಾಕುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಡಾ ಶರಣಪ್ಪ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next