Advertisement

ಸಹಾಯವಾಣಿ ಸಮಸ್ಯೆ ಸರಿಪಡಿಸಿ

06:16 AM Jun 10, 2020 | Suhan S |

ಜಮಖಂಡಿ: ನಗರದ ಹೆಸ್ಕಾಂ ಇಲಾಖೆ ವ್ಯಾಪ್ತಿಯ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆ ಸೇವೆ ಸಲ್ಲಿಸುತ್ತಿಲ್ಲ. ಸಹಾಯವಾಣಿ ಕೇವಲ ಕಾಟಾಚಾರಕ್ಕೆ ಮಾತ್ರ ಇದೆ ಎಂಬಂತಾಗಿದೆ ಎಂದು ನಗರಸಭೆ ಸದಸ್ಯ ಪ್ರಶಾಂತ ಚರಕಿ ಹೇಳಿದರು.

Advertisement

ನಗರದ ಮಿನಿ ವಿಧಾನಸೌಧ ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಡಾ| ಸಿದ್ದು ಹುಲ್ಲೊಳ್ಳಿ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ಸಹಾಯವಾಣಿಗೆ ಕರೆ ಮಾಡಿದರೇ ಸಹಾಯವಾಣಿ ಕೇಂದ್ರದ ನೌಕರರು ಕರೆ ಸ್ವೀಕರಿಸುತ್ತಿಲ್ಲ. ಹೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಲು ತೊಂದರೆಯಾಗುತ್ತಿದೆ. ಕೂಡಲೇ ಸಹಾಯವಾಣಿ ಕೇಂದ್ರ ಜನರಿಗೆ ಸಮರ್ಪಕ ರೀತಿಯಲ್ಲಿ ಸೇವೆ ನೀಡುವಂತೆ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next