Advertisement

ಎಫ್ ಕೆಸಿಸಿಐ ನೂತನ ಅಧ್ಯಕ್ಷ ಸುಧಾಕರ್‌ ಶೆಟ್ಟಿ

06:20 AM Jul 01, 2018 | |

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್ ಕೆಸಿಸಿಐ) ನೂತನ ಅಧ್ಯಕ್ಷರಾಗಿ
ಸುಧಾಕರ್‌ ಎಸ್‌.ಶೆಟ್ಟಿ, ಹಿರಿಯ ಉಪಾಧ್ಯಕ್ಷರಾಗಿ ಸಿ.ಆರ್‌.ಜನಾರ್ದನ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ನಗರದ ಕೆ.ಜಿ.ರಸ್ತೆಯಲ್ಲಿರುವ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಸುಧಾಕರ್‌ ಎಸ್‌. ಶೆಟ್ಟಿ, ಸಿ.ಆರ್‌.ಜನಾರ್ದನ್‌ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪೆರಿಕಲ್‌ ಎಂ.ಸುಂದರ್‌ ಜಯ ಗಳಿಸಿದ್ದಾರೆ. ಶಿಕ್ಷಣ, ರಫ್ತು, ಭೂ ಅಭಿವೃದ್ಧಿ ಸಮಾಜ ಸೇವಾ ಕ್ಷೇತ್ರದಲ್ಲಿ ತೊಡಗಿಸಿ
ಕೊಂಡಿರುವ ಉದ್ಯಮಿ ಸುಧಾಕರ್‌ ಶೆಟ್ಟಿ ಈ ಹಿಂದೆ ಹಿರಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next