Advertisement

ಗೊಂದಲಕ್ಕೆ ತೆರೆ: ಚಾಮರಾಜಪೇಟೆ ಮೈದಾನದಲ್ಲಿ ಜಿಲ್ಲಾಡಳಿತದಿಂದ ಧ್ವಜಾರೋಹಣ

10:42 PM Aug 11, 2022 | Team Udayavani |

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣವನ್ನು ಜಿಲ್ಲಾಡಳಿತದಿಂದಲೇ ಮಾಡಲು ತೀರ್ಮಾನಿಸಲಾಗಿದ್ದು, ಆ ಮೂಲಕ ಈ ಬಗ್ಗೆ ಮೂಡಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.

Advertisement

ಕಂದಾಯ ಸಚಿವ ಆರ್‌.ಅಶೋಕ್‌ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಜರಗಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಚಾಮರಾಜಪೇಟೆ ಮೈದಾನದಲ್ಲಿ ಕಂದಾಯ ಇಲಾಖೆ ಉಪ ವಿಭಾಗಾಧಿಕಾರಿ ಧ್ವಜಾರೋಹಣ ಮಾಡಲಿದ್ದಾರೆ. ಶಿಷ್ಟಾಚಾರ ಪ್ರಕಾರ ಸ್ಥಳೀಯ ಶಾಸಕರು ಹಾಗೂ ಸಂಸದರು ಪಾಲ್ಗೊಳ್ಳಬಹುದು. ಚಾಮರಾಜಪೇಟೆಯ ಸಾರ್ವಜನಿಕರು ಕೂಡ ಭಾಗಿಯಾಗಬಹುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next