Advertisement

ಹವಾಮಾನ ವೈಪರೀತ್ಯ ಮಂಗಳೂರಿನಲ್ಲಿ ಇಳಿಯದ ವಿಮಾನ

02:19 AM Sep 26, 2021 | Team Udayavani |

ಮಂಗಳೂರು : ದುಬಾೖ ಮತ್ತು ದಮ್ಮಾಮ್‌ನಿಂದ ಹೊರಟು ಶನಿವಾರ ಮುಂಜಾನೆ ಮಂಗಳೂರಿನಲ್ಲಿ ಇಳಿಯಬೇಕಾಗಿದ್ದ ಎರಡು ವಿಮಾನಗಳು ಮಂಜು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಇಲ್ಲಿ ಇಳಿಯದೆ ಕೇರಳದ ಕಲ್ಲಿಕೋಟೆಯಲ್ಲಿ ಇಳಿದವು. ಸಂಜೆ ವೇಳೆಗೆ ಮಂಗಳೂರಿಗೆ ಆಗಮಿಸಿವೆ ಎಂದು ಇಂಡಿಯನ್‌ ಏರ್‌ಲೈನ್ಸ್‌ನ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪ್ರಯಾಣಿಕರ ಅಸಮಾಧಾನ
ಕಲ್ಲಿಕೋಟೆಗೆ ತೆರಳಿದ ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಆಹಾರ ನೀಡದೆ ನಿರ್ಲಕ್ಷಿಸಲಾಯಿತು ಎಂದು ಕೆಲವು ಪ್ರಯಾಣಿಕರು ನಿಲ್ದಾಣದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ದೂರಿಕೊಂಡಿದ್ದಾರೆ. ಈ ಬಗ್ಗೆ ಯಾವುದೇ ಅಧಿಕೃತ ದೂರು ಬಂದಿಲ್ಲ ಎಂದು ಏರ್‌ಇಂಡಿಯಾ ಎಕ್ಸ್ಪ್ರೆಸ್ ಮಂಗಳೂರು ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next