Advertisement

ಅಣೆಕಟ್ಟು ಅಧಿಕಾರಿಗಳಿಂದ ಪ್ರವಾಹ ಮುನ್ಸೂಚನೆ

10:50 AM Jul 11, 2020 | Suhan S |

ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಅರಿತು ಕೃಷ್ಣಾ ನದಿ ತೀರದ ಯಾದಗಿರಿ, ರಾಯಚೂರು ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪ್ರವಾಹ ಮುನ್ಸೂಚನೆ ಕುರಿತು ಈಗಾಗಲೇ ಮಾಹಿತಿ ನೀಡಲಾಗಿದೆ ಎಂದು ಅಣೆಕಟ್ಟು ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್‌ ಶಂಕರ ನಾಯ್ಯೋಡಿ ತಿಳಿಸಿದ್ದಾರೆ.

Advertisement

ಬಸವಸಾಗರ ಜಲಾಶಯಕ್ಕೆ ಆಲಮಟ್ಟಿ ಲಾಲ್‌ ಬಹದ್ದೂರ ಶಾಸ್ತ್ರಿ ಜಲಾಶಯದಿಂದ ಶುಕ್ರವಾರ 20 ಸಾವಿರ ಕ್ಯೂಸೆಕ್‌ ನೀರು ಹರಿದು ಬಂದಿದ್ದರಿಂದ ಜಲಾಶಯ ಬಹುತೇಕ ಭರ್ತಿ ಹಂತಕ್ಕೆ ತಲುಪಿದೆ. ಒಂದೊಮ್ಮೆ ಒಳಹರಿವಿನ ಪ್ರಮಾಣ ಏರಿಕೆಯಾದರೆ ಅಣೆಕಟ್ಟೆ ಕ್ರಸ್ಟ್ ಗೇಟ್‌ಗಳ ಮೂಲಕ ಕೃಷ್ಣಾ ನದಿ ಪಾತ್ರಕ್ಕೆ ಯಾವುದೇ ಸಂದರ್ಭದಲ್ಲಿ ನೀರು ಹರಿಬಿಡುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ನೀರು ಹರಿಬಿಟ್ಟ ಸಂದರ್ಭದಲ್ಲಿ ನದಿ ತೀರದ ಗ್ರಾಮಗಳ ಜನ ಮತ್ತು ಜಾನುವಾರಗಳು ನೀರಿಗೆ ಇಳಿಯಬಾರದು. ಯಾವುದೇ ಚಟುವಟಿಕೆ ನಡೆಸದಂತೆ, ಮುಂಜಾಗೃತ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಮನವಿ ಮಾಡಿದ್ದಾರೆ. ಅಣೆಕಟ್ಟು ಅಧಿಕಾರಿಗಳ ಮಾಹಿತಿ ಯಂತೆ ಆಲಮಟ್ಟಿ ಜಲಾಶಯಕ್ಕೆ ಒಳ ಹರಿವು 70 ಸಾವಿರ ಕ್ಯೂಸೆಕ್‌ ಇದೆ. 84 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ನಾರಾಯಣಪುರ ಅಣೆಕಟ್ಟಿಗೆ 20 ಸಾವಿರ ಕ್ಯೂಸೆಕ್‌ ಒಳಹರಿವು ಇದ್ದು, ಜಲಾಶಯದ ಗರಿಷ್ಠ ಮಟ್ಟದಲ್ಲಿ 490.16 ಮೀಟರ್‌ಗೆ ನೀರು ಬಂದು ತಲುಪಿದೆ. 24.60 ಟಿಎಂಸಿ ಅಡಿ ನೀರು ಸಂಗ್ರಹ ಇದೆ.

Advertisement

Udayavani is now on Telegram. Click here to join our channel and stay updated with the latest news.

Next