Advertisement

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

12:10 PM Jul 08, 2024 | Team Udayavani |

ಉಡುಪಿ: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗುಂಡಿಬೈಲು ಪ್ರದೇಶ ಜಲಾವೃತಗೊಂಡಿದ್ದು ಸಂಪರ್ಕ ರಸ್ತೆಗಳಿಗೆ ನೀರು ನುಗ್ಗಿದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.

Advertisement

ಗುಂಡಿಬೈಲು ಪಾಡಿಗಾರು ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಇಲ್ಲಿನ ಪಿಜಿ ಕಟ್ಟಡದಲ್ಲಿ ಸಿಲುಕಿದ ವಿದ್ಯಾರ್ಥಿಗಳ ರಕ್ಷಣೆಗೆ ಅಗ್ನಿಶಾಮಕ ದಳ ಧಾವಿಸಿ ರಕ್ಷಣೆ ಮಾಡುತ್ತಿದ್ದು ಈ ಭಾಗದಲ್ಲಿ ಇನ್ನೂ ಕೆಲ ನಾಗರಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಅವರನ್ನು ರಕ್ಷಿಸುವ ಕಾರ್ಯ ಅಗ್ನಿಶಾಮಕ ತಂಡ ನಡೆಸುತ್ತಿದೆ.

ಭಾರಿ ಮಳೆಗೆ ರಸ್ತೆ ಜಲಾವೃತಗೊಂಡು ಕಟ್ಟಡದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಅಗ್ನಿಶಾಮಕ ತಂಡ ಬೋಟ್ ಮೂಲಕ ರಕ್ಷಣೆ ಮಾಡಿದ್ದು, ಇನ್ನು ಈ ಭಾಗದಲ್ಲಿ ಅನೇಕ ಮನೆಗಳಿದ್ದು ಅಲ್ಲಿ ಸಿಲುಕಿದ್ದವರನ್ನು ರಕ್ಷಣೆ ಮಾಡುವ ಕೆಲಸ ಭರದಿಂದ ಸಾಗುತ್ತಿದೆ.

ಇದನ್ನೂ ಓದಿ: Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Advertisement
Advertisement

Udayavani is now on Telegram. Click here to join our channel and stay updated with the latest news.

Next