Advertisement

ನೆರೆ ಪರಿಹಾರಕ್ಕೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮದಿಂದ 5 ಕೋಟಿ ರೂ

01:18 PM Aug 19, 2019 | Team Udayavani |

ಬೆಂಗಳೂರು: ರಾಜ್ಯ ಪ್ರವಾಹ ಪರಿಹಾರಕ್ಕೆ ನೆರವು ಹರಿದು ಬರುತ್ತಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮದಿಂದ 5 ಕೋಟಿ ರೂ ನೀಡಲಾಯಿತು.

Advertisement

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಿಗಮದಿಂದ ಚೆಕ್ಕನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶ, ಮುಖ್ಯ ಅಭಿಯಂತರ ಲೊಕೇಶ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಲ್. ಕೆ. ಅತೀಕ್ ಉಪಸ್ಥಿತರಿದ್ದರು.

ಜಯದೇವ ಹೃದ್ರೋಗ ಸಂಸ್ಥೆಯಿಂದ 28 ಲಕ್ಷ ರೂ


ಜಯದೇವ ಹೃದ್ರೋಗ ನಿರ್ದೇಶಕ ಡಾಕ್ಟರ್ ಸಿ.ಎನ್. ಮಂಜುನಾಥ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 28 ಲಕ್ಷ ರೂಪಾಯಿಗಳ ಚೆಕ್ಕನ್ನು ಸಂಸ್ಥೆಯ ಹಸ್ತಾಂತರಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಡಾಲರ್ಸ್ ಕಾಲೋನಿಯಲ್ಲಿರುವ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next