Advertisement

ನೆರೆಪೀಡಿತರಿಗೆ ಲಕ್ಷಾಂತರ ರೂ. ಮೊತ್ತದ ವಸ್ತುಗಳ ಕೊಡುಗೆ

12:11 PM Aug 28, 2019 | Suhan S |

ಮುಂಬಯಿ, ಆ. 27: ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ ವತಿಯಿಂದ ರಾಮರಾಜ ಕ್ಷತ್ರಿಯ ಸೇವಾ ಸಂಘದ ರಾಜ್‌ಕುಮಾರ್‌ ಕಾರ್ನಾಡ್‌ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯಾದ್ಯಂತ ನೆರೆಪೀಡಿತರಿಗೆ ನೆರವಾಗುವಂತೆ ಸುಮಾರು ಎರಡು ಲಕ್ಷ ರೂ. ಮೊತ್ತದ ದಿನೋಪಯೋಗಿ ಅಗತ್ಯ ವಸ್ತುಗಳನ್ನು ನೀಡಲಾಯಿತು.

Advertisement

ಸಾಂತಾಕ್ರೂಜ್‌ ಪೂರ್ವದಲ್ಲಿನ ಶ್ರೀ ಪೇಜಾವರ ಮಠ ಮುಂಬಯಿ ಶಾಖೆಯ ಶ್ರೀ ವಿಶ್ವೇಶತೀರ್ಥ ಸಭಾಗೃಹದಲ್ಲಿ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಘದ ಅಧ್ಯಕ್ಷ ರೋನ್ಸ್‌ ಬಂಟ್ವಾಳ್‌ ಅವರಿಗೆ ಸಂಘದ ಪದಾಧಿಕಾರಿಗಳು ದಿನೋಪಯೋಗಿ ವಸ್ತುಗಳನ್ನು ಹಸ್ತಾಂತರಿಸಿದರು. ರಾಮರಾಜ ಕ್ಷತ್ರಿಯ ಸಂಘದ ಉಪಾಧ್ಯಕ್ಷ ಎನ್‌. ರವೀಂದ್ರನಾಥ್‌ ರಾವ್‌, ಗೌರವ ಪ್ರಧಾನ ಕಾರ್ಯದರ್ಶಿ ಕೇದರ್‌ನಾಥ್‌ ಆರ್‌. ಬೋಳಾರ್‌, ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೇಯಾ ಎಸ್‌. ರಾವ್‌, ಗೌರವ ಕಾರ್ಯದರ್ಶಿ ಆರತಿ ಎನ್‌. ರಾವ್‌, ಗೌರವ ಕೋಶಾಧಿಕಾರಿ ಕವಿತಾ ಆರ್‌. ರಾವ್‌ ಸೇರಿದಂತೆ ಇತರ ಪದಾಧಿಕಾರಿಗಳು, ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದು ಶ್ರಮದಿಂದ ಸಂಗ್ರಹಿತ ವಸ್ತುಗಳನ್ನು ಪತ್ರಕರ್ತರ ಸಂಘಕ್ಕೆ ಹಸ್ತಾಂತರಿಸಿದರು.

ಸುಮಾರು ಒಂದು ಲೋಡ್‌ನ‌ಷ್ಟು ಸಂಗ್ರಹಿತ ವಸ್ತುಗಳನ್ನು ಸುನೀಲ್ ಪಾಯ್ಸ್ ಪುತ್ತೂರು ಮಾಲೀಕತ್ವದ ಕೆನರಾ ಪಿಂಟೋ ಟ್ರಾವೆಲ್ಸ್ ಬಸ್‌ ಮುಖೇನ ಉಚಿತವಾಗಿ ಕರ್ನಾಟಕಕ್ಕೆ ರವಾನಿಸಲಾಯಿತು. ಪತ್ರಕರ್ತರ ಸಂಘದ ಉಪಾಧ್ಯಕ್ಷ ರಂಗ ಎಸ್‌. ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎಸ್‌. ಸುವರ್ಣ, ಕೃಷ್ಣ ಬಂಗೇರ ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next