Advertisement

ಮಹಾಮಳೆ: ಬೆಳಗಾವಿಯಲ್ಲಿ ಮತ್ತೆ ಪ್ರವಾಹ ಭೀತಿ

10:14 AM Sep 06, 2019 | Team Udayavani |

ಬೆಳಗಾವಿ: ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಕೃಷ್ಣಾ, ವೇದಗಂಗಾ ಹಾಗೂ ಘಟಪ್ರಭಾ ನದಿಗಳ ವ್ಯಾಪ್ತಿಯ ನದಿ ತೀರದ ಗ್ರಾಮಗಳಲ್ಲಿ ಮತ್ತೆ ಪ್ರವಾಹದ ಆತಂಕ ಎದುರಾಗಿದೆ.

Advertisement

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದರಿಂದ ಶುಕ್ರವಾರ ಕೃಷ್ಣಾ ನದಿಯ ಒಳ ಹರಿವಿನಲ್ಲಿ ಸುಮಾರು ಎರಡು ಲಕ್ಷ ಕ್ಯೂಸೆಕ್ಸ ನೀರು ಹರಿದು ಬರುವ ಸಾಧ್ಯತೆ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಕೃಷ್ಣಾ ನದಿಯ ನೀರಿನ ಮಟ್ಟ ಒಂದೇ ಸಮನೆ ಏರಿಕೆಯಾಗುತ್ತಿರುವದರಿಂದ ನದಿ ತೀರದ ಜನರು ಜಾಗೃತೆಯಿಂದ ಇರಬೇಕು ಎಂದು ಅವರು ಹೇಳಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರದ ವ್ಯಾಪಕ ಮಳೆಯಿಂದ ಘಟಪ್ರಭಾ ನದಿಯ ನೀರಿನ ಮಟ್ಟ ಮತ್ತಷ್ಟು ಹೆಚ್ಚಳವಾಗಿದೆ. ಹಿಡಕಲ್ ಜಲಾಶಯಕ್ಕೆ ಈಗ 15 ಸಾವಿರ ಕ್ಯೂಸೆಕ್ಸ ನೀರು ಹರಿದು ಬರುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next