Advertisement

ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್!: ಕಾಂಗ್ರೆಸ್ ಟೀಕೆ

03:14 PM Sep 13, 2022 | Team Udayavani |

ಬೆಂಗಳೂರು: ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್ ಎಂದು ರಾಜ್ಯ ಕಾಂಗ್ರೆಸ್ ಟೀಕೆ ಮಾಡಿದೆ. ಮಂಗಳೂರಿನ ಕೂಳೂರು ಸೇತುವೆಯ ಚಿತ್ರ ಹಾಕಿರುವ ಕಾಂಗ್ರೆಸ್, ರಾಜ್ಯ ಸರ್ಕಾರವನ್ನು ಟೀಕಿಸಿದೆ.

Advertisement

ಪ್ರಧಾನಿ ಮೋದಿ ಅವರ ಮಂಗಳೂರು ಭೇಟಿ (ಸೆ.02) ವೇಳೆ ಮಂಗಳೂರಿನ ಕೂಳೂರು ಸೇತುವೆಯಲ್ಲಿ ಹೊಸದಾಗಿ ಡಾಮರೀಕರಣ ಮಾಡಲಾಗಿತ್ತು. ಆದರೆ ಇದಾಗಿ ಹತ್ತು ದಿನದಲ್ಲೇ ಸೇತುವೆಯಲ್ಲಿ ಗುಂಡಿ ಬಿದ್ದಿದೆ. ಈ ಚಿತ್ರವನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಇದು 40% ಕಮಿಷನ್ ಲೂಟಿಗೆ ಸಾಕ್ಷಿ’ ಎಂದಿದೆ.

ಇದನ್ನೂ ಓದಿ:ಕಾರಿನ ಮೇಲೆ ಉರುಳಿ ಬಿದ್ದ ಸರಕು ಹೊತ್ತ ಟ್ರೈಲರ್ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಕಾಂಗ್ರೆಸ್, ನಿಮ್ಮ ಸರ್ಕಾರದ 40% ಕಮಿಷನ್ ಲೂಟಿಗೆ ಇನ್ಯಾವ ಸಾಕ್ಷಿ ಬೇಕು ಬಸವರಾಜ ಬೊಮ್ಮಾಯಿ ಅವರೇ, ಇದೇ ರಸ್ತೆಯ ಮೇಲೆ ಬಂದು “ಡಬಲ್ ಇಂಜಿನ್ ಅಭಿವೃದ್ಧಿಯಾಗುತ್ತದೆ” ಎಂದು ಭಾಷಣ ಮಾಡಿದ್ದ ನರೇಂದ್ರ ಮೋದಿ ಅವರೇ, ಈ ಲೂಟಿ ತನಿಖೆಗೆ ಅರ್ಹವಲ್ಲವೇ ಎಂದು ಪ್ರಶ್ನಿಸಿದೆ. ಅಲ್ಲದೆ ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ಅಡುಗೆ ಮನೆಯಲ್ಲಿ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್ ಎಂದು ವ್ಯಂಗ್ಯವಾಡಿದೆ.

Koo App

Advertisement

ನಿಮ್ಮ ಸರ್ಕಾರದ 40% ಕಮಿಷನ್ ಲೂಟಿಗೆ ಇನ್ಯಾವ ಸಾಕ್ಷಿ ಬೇಕು @bsbommai ಅವರೇ, ಇದೇ ರಸ್ತೆಯ ಮೇಲೆ ಬಂದು “ಡಬಲ್ ಇಂಜಿನ್ ಅಭಿವೃದ್ಧಿಯಾಗುತ್ತದೆ” ಎಂದು ಭಾಷಣ ಮಾಡಿದ್ದ @narendramodi ಅವರೇ, ಈ ಲೂಟಿ ತನಿಖೆಗೆ ಅರ್ಹವಲ್ಲವೇ? ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ಅಡುಗೆ ಮನೆಯಲ್ಲಿ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್!

ಕರ್ನಾಟಕ ಕಾಂಗ್ರೆಸ್ (@inckarnataka) 13 Sep 2022

Advertisement

Udayavani is now on Telegram. Click here to join our channel and stay updated with the latest news.

Next