Advertisement

ಮೇವು ಹಗರಣ:ಲಾಲುಗೆ 7 ವರ್ಷ ಜೈಲು,30 ಲಕ್ಷ ರೂಪಾಯಿ ದಂಡ

11:54 AM Mar 24, 2018 | Team Udayavani |

ರಾಂಚಿ: ಮೇವು ಹಗರಣದ 4 ನೇ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಗೆ ಜಾರ್ಖಂಡ್‌ನ‌ ವಿಶೇಷ ಸಿಬಿಐ ನ್ಯಾಯಾಲಯ ಶನಿವಾರ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 

Advertisement

ಧುಮ್ಕಾ ಖಜಾನೆಯಿಂದ 1990ರಲ್ಲಿ 3.13 ಕೋಟಿ ರೂ. ಅಕ್ರಮವಾಗಿ ವರ್ಗಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಈ ಶಿಕ್ಷೆ ವಿಧಿಸಲಾಗಿದ್ದು 30 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. 

ಸಿಬಿಐ ನ್ಯಾಯಾಧೀಶ ಶಿವಪಾಲ್‌ ಸಿಂಗ್‌ ಸೋಮವಾರ ಈ ಸಂಬಂಧ ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ ಮಾಜಿ ಸಿಎಂ ಜಗನ್ನಾಥ ಮಿಶ್ರಾರನ್ನು ನಿರಪರಾಧಿ ಎಂದು ಘೋಷಿಸಿತ್ತು. 

ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಲಾಲು ಪ್ರಸಾದ್‌ ಬೆಂಬಲಿಗರು ಮುಂದಾಗಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next