Advertisement

ಡೊರಾಂಡಾ ಖಜಾನೆ ಪ್ರಕರಣ; ಲಾಲುಪ್ರಸಾದ್ ಯಾದವ್ ಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು

04:48 PM Apr 22, 2022 | Team Udayavani |

ನವದೆಹಲಿ: ಡೊರಾಂಡಾ ಖಜಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ ವರಿಷ್ಠ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ (ಏಪ್ರಿಲ್ 23) ಜಾಮೀನು ಮಂಜೂರು ಮಾಡಿರುವುದಾಗಿ ವರದಿ ತಿಳಿಸಿದೆ.

Advertisement

ಡೊರಾಂಡಾ ಖಜಾನೆ ಪ್ರಕರಣದಲ್ಲಿ ಸಿಬಿಐ ವಿಶೇಷ ಕೋರ್ಟ್ ಲಾಲು ಪ್ರಸಾದ್ ಯಾದವ್ ಗೆ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು. ಮೇವು ಹಗರಣದಲ್ಲಿ ಶಾಮೀಲಾಗಿದ್ದ ಲಾಲು ಪ್ರಸಾದ್ ಯಾದವ್ ಡೊರಾಂಡಾ ಖಜಾನೆಯಿಂದ 139 ಕೋಟಿಗೂ ಅಧಿಕ ಹಣವನ್ನು ಕಾನೂನು ಬಾಹಿರವಾಗಿ ಬಳಸಿಕೊಂಡ ಪ್ರಕರಣದಲ್ಲಿ ದೋಷಿ ಎಂದು ಸಿಬಿಐ ಕೋರ್ಟ್ ಫೆಬ್ರುವರಿಯಲ್ಲಿ ತೀರ್ಪು ನೀಡಿತ್ತು.

ಅನಾರೋಗ್ಯಕ್ಕೊಳಗಾಗಿರು ಲಾಲುಪ್ರಸಾದ್ ಯಾದವ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಬೇಕೆಂಬ ನಮ್ಮ ಮನವಿಯನ್ನು ಜಾರ್ಖಂಡ್ ಹೈಕೋರ್ಟ್ ಸ್ವೀಕರಿಸಿದ್ದು, ಜಾಮೀನು ಮಂಜೂರು ಮಾಡಿದೆ. ಲಾಲು ಪ್ರಸಾದ್ ಅವರು ಈಗಾಗಲೇ 41 ತಿಂಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದು, ಜಾಮೀನು ಮಂಜೂರು ಮಾಡಬೇಕೆಂದು ಮನವಿ ಮಾಡಿಕೊಂಡಿರುವುದಾಗಿ ಲಾಲು ಪ್ರಸಾದ್ ಪರ ವಕೀಲರಾದ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.

ಮೇವು ಹಗರಣದಲ್ಲಿ ಲಾಲು ಪ್ರಸಾದ್ ವಿರುದ್ಧದ ಐದನೇ ಹಾಗೂ ಅಂತಿಮ ಪ್ರಕರಣವಾದ 139 ಕೋಟಿ ರೂಪಾಯಿಯ ಡೊರಾಂಡಾ ಖಚಾನೆ ವಂಚನೆ ಪ್ರಕರಣದಲ್ಲಿ ಸಿಬಿಐ ರಾಂಚಿಯ ಸಿಬಿಐ ಕೋರ್ಟ್ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿ, 60 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ತೀರ್ಪು ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next