Advertisement

ನಾಳೆ ಜನಪದ ಉತ್ಸವ ಕಾರ್ಯಕ್ರಮ

04:00 PM Oct 26, 2019 | Suhan S |

ಕನಕಪುರ: ಧಮ್ಮ ದೀವಿಗೆ ಚಾರಿಟಬಲ್‌ ಟ್ರಸ್ಟ್‌ನಿಂದ ಅ.27ರ ಭಾನುವಾರ ಜನಪದ ಉತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಮಲ್ಲಿಕಾರ್ಜುನ್‌ ತಿಳಿಸಿದರು.

Advertisement

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜನಪದ ಎಂಬುದು ಗ್ರಾಮೀಣ ಭಾಗದ ಜನರ ಬದುಕನ್ನು ಪ್ರತಿನಿಧಿಸುವ ಕಲೆ. ಜಾನಪದವನ್ನು ಪ್ರೋತ್ಸಾಹಿಸುವ ಮತ್ತು ಗ್ರಾಮೀಣ ಜನರಲ್ಲಿ ಅಡಗಿರುವ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ನಡೆಯಲಿದೆ.

27ರ ಬೆಳಗ್ಗೆ 11 ಗಂಟೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಕಲಾ ಪ್ರಕಾರಗಳ ಮೆರವಣಿಗೆಯನ್ನು ರಂಗನಿರ್ದೇಶಕ ಎಂ.ಸಿ. ನಾಗರಾಜ ಮತ್ತು ಜಾನಪದ ಅಕಾಡೆಮಿ ಸದಸ್ಯ ಕಾಳಯ್ಯ ನೆರವೇರಿಸಲಿದ್ದಾರೆ. ಅ.27ರ ಸಂಜೆ 4.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಾನಪದ ವಿದ್ವಾಂಸ ಬಾನಂದೂರು ಕೆಂಪಯ್ಯ ಮತ್ತು ಹೃದಯ ರೋಗ ತಜ್ಞ ಡಾ.ಬೊಮ್ಮಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿನ ಕಾರ್ಯದರ್ಶಿ ನಲ್ಲಹಳ್ಳಿ ಮುನಿರಾಜು, ಮೆಳೆಕೋಟೆ ಕೃಷ್ಣಪ್ಪ, ಚಿಕ್ಕನಹಳ್ಳಿ ಬಸವರಾಜು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next