Advertisement

ಸರ್ಕಾರದ ಸಲಹೆ, ಸೂಚನೆ ಪಾಲಿಸಿ

03:31 PM Mar 20, 2020 | Suhan S |

ಹುಣಸೂರು: ಬೇರೆ ರಾಜ್ಯಗಳಿಂದ ವಾಪಸ್ಸಾಗುತ್ತಿರುವ ಜನರು ಸೇರಿದಂತೆ ಗ್ರಾಮಸ್ಥರಿಗೆ ಜ್ವರ, ಕೆಮ್ಮು, ತಲೆನೋವು, ಶೀತ ಸೇರಿದಂತೆ ಆರೋಗ್ಯದಲ್ಲಿ ಏರುಪೇರಾದರೆ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ತೆರಳಿ, ಚಿಕಿತ್ಸೆ ಪಡೆದುಕೊಳ್ಳುವುದು ಒಳಿತು ಎಂದು ಡಾ.ಜೋಗೇಂದ್ರನಾಥ್‌ ತಿಳಿಸಿದರು.

Advertisement

ತಾಲೂಕಿನ ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಕೋವಿಡ್ 19 ವೈರಸ್‌ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ರೀತಿಯ ಅನಾರೋಗ್ಯ ಕಾಡಿದರೆ ತಾತ್ಸಾರ ಮಾಡದೆ ನಿಮ್ಮ ವೈದ್ಯರು ಅಥವಾ ಹತ್ತಿರದ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯಬೇಕು. ಇಡೀ ವಿಶ್ವವೇ ಮಹಾಮಾರಿ ಕೊರೊನಾ ವೈರಸ್‌ನಿಂದ ಕಂಗೆಟ್ಟಿದ್ದು, ವೈದ್ಯ ಲೋಕಕ್ಕೆ ಸವಾಲಾಗಿ ಪರಿಣಮಿಸಿದೆ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆ ಗಳು ಸರ್ಕಾರದ ಆದೇಶ ಹಾಗೂ ಆರೋಗ್ಯ ಇಲಾಖೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿದರು. ಕೋವಿಡ್ 19 ಸೋಂಕು ಕುರಿತ ಜಾಗೃತಿ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next