Advertisement

ಸಂಚಾರಿ ನಿಯಮ ಪಾಲಿಸಿ: ಬಸವರಾಜ್‌

08:39 PM Aug 29, 2020 | Suhan S |

ಮೊಳಕಾಲ್ಮೂರು: ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಬ್ಬ ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ರಸ್ತೆ ಅಪಘಾತ ತಡೆಯಲು ಸಾಧ್ಯ ಎಂದು ಪಿಎಸ್‌ಐ ಎಂ.ಕೆ. ಬಸವರಾಜ್‌ ತಿಳಿಸಿದರು.

Advertisement

ಪಟ್ಟಣದಲ್ಲಿ ವಾಹನ ಚಾಲಕರ ಟ್ರೇಡ್‌ ಯೂನಿಯನ್‌ ಘಟಕ ವತಿಯಿಂದ ಆಯೋಜಿಸಿದ್ದ ಚಾಲಕರ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆಗಳಲ್ಲಿ ಸಂಚರಿಸುವ ಆಟೋ, ಟ್ರಾಫಿಕ್ಸ್‌ ಹಾಗೂ ಇನ್ನಿತರ ವಾಹನಗಳ ಚಾಲಕರು ವಾಹನ ಚಾಲನಾ ಪರವಾನಗಿ ಪಡೆದುಕೊಂಡಲ್ಲಿ ಮಾತ್ರ ವಾಹನ ಚಲಾಯಿಸಬೇಕು. ವಾಹನ ಚಾಲಕರು ಆರ್‌.ಟಿ.ಒ ಕಚೇರಿಯ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದರು. ತಹಶೀಲ್ದಾರ್‌ ಮಲ್ಲಿಕಾರ್ಜುನ ಮಾತನಾಡಿ, ವಾಹನ ಚಾಲಕರು ರಸ್ತೆ ನಿಯಮವನ್ನು ಸರಿಯಾಗಿ ಪಾಲಿಸಿದ್ದಲ್ಲಿ ಚಾಲಕರು ಸುರಕ್ಷಿತವಾ ಗಿರಲು ಸಾಧ್ಯ. ವಾಹನ ಚಾಲಕರೊಂದಿಗೆ ಪ್ರಯಾಣಿಸುವ ಪ್ರಯಾಣಿಕರನ್ನು ರಕ್ಷಿಸುವ ಮೂಲಕ ಚಾಲನೆ ಮಾಡಬೇಕು. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಮಾತನಾಡಬಾರದು ಎಂದರು.

ತಾಪಂ ಇಒ ಪ್ರಕಾಶ್‌, ಕಾರ್ಮಿಕ ಇಲಾಖೆ ಅಧಿ ಕಾರಿ ಕುಸುಮ, ಸಿಪಿಐ ಎಂ.ಎನ್‌.ಎಚ್‌. ಮಾರಣ್ಣ, ನಾರಾಯಣಸ್ವಾಮಿ, ಗಿರೀಶ್‌, ಸೈಯದ್‌ ಸಾದತ್‌, ನೂರ್‌ ಮಹಮ್ಮದ್‌, ಮಂಜು, ಬಿ.ಪಿ.ಮಂಜುನಾಥ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next