Advertisement

ಶಾಸಕರ ಮಧ್ಯಸ್ಥಿಕೆ: ಆಹಾರ ಧಾನ್ಯ ಎತ್ತುವಳಿ

04:30 PM Nov 09, 2020 | Suhan S |

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿ ನಲ್ಲಿ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ಆಹಾರ ಇಲಾಖೆಯ ಅಧಿಕಾರಿಗಳ ನಡುವೆ ಭುಗಿಲೆದ್ದಿರುವ ವಿವಾದವನ್ನು ಶಾಸಕ ಎನ್‌.ಎಚ್‌. ಶಿವಶಂಕರ್‌ರೆಡ್ಡಿ ಅವರು ಇತ್ಯರ್ಥ ಮಾಡಿದ್ದು, ಶಾಸ ಕರ ಸಲಹೆ ಮೇರೆಗೆ ಅಂಗಡಿ ಮಾಲೀಕರು ಗೋದಾಮಿನಿಂದ ಆಹಾರಧಾನ್ಯವನ್ನು ಎತ್ತುವಳಿ ಮಾಡುತ್ತಿದ್ದಾರೆ.

Advertisement

ಸಮಸ್ಯೆ ಇತ್ಯರ್ಥಕ್ಕೆ ದೌಡು: ಗೌರಿಬಿದನೂರು ತಾಲೂಕಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಅಂಗಡಿ ಮಾಲೀಕರ ಮಧ್ಯೆ ಸಂಘರ್ಷ ತಾರಕಕ್ಕೇರಿ ಸಗಟು ಗೋದಾಮಿನಿಂದ ಪಡಿತರ ಎತ್ತುವಳಿ ಮಾಡಲು ನಿರಾಕರಿಸಿದ 10 ಸರ್ಕಾರಿ ನ್ಯಾಯಬೆಲೆಅಂಗಡಿ ಮಾಲೀಕರ ಪರವಾನಿಗೆಯನ್ನು ಆಹಾರ ಇಲಾಖೆಯ ಉಪನಿರ್ದೇಶಕಿ ಸವಿತಾ ಅಮಾನತು ಗೊಳಿಸಿರುವ ಹಿನ್ನೆಲೆಯಲ್ಲಿ ಶಾಸಕ ಶಿವಶಂಕರ್‌ರೆಡ್ಡಿ ಮಧ್ಯ ಪ್ರವೇಶಿಸಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಿದ್ದಾರೆ.

ಗೋದಾಮಿನಿಂದ ಎತ್ತುವಳಿ: ನಿಗದಿತ ಸಮಯದಲ್ಲಿ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಿಲ್ಲ ಎಂಬಕಾರಣಕ್ಕೆ 10 ಅಂಗಡಿ ಮಾಲೀಕರ ಪರವಾನಿಗೆ ರದ್ದುಗೊಳಿಸಿರುವ ಆದೇಶ ವಾಪಸ್ಸು ಪಡೆಯಬೇಕೆಂದುಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಹಾಗೂ ಮಾಲೀಕರು ಪರಸ್ಪರ ಸಹಕಾರದಿಂದ ಬಡವರಿಗೆ ಸರ್ಕಾರ ನೀಡುತ್ತಿರುವ ಆಹಾರಧಾನ್ಯಗಳನ್ನು ವಿತರಿಸಲು ಕ್ರಮ ಕೈಗೊಳ್ಳ ಬೇಕೆಂದು ಸಲಹೆ ನೀಡಿದ್ದಾರೆ.ಇದರಿಂದ ಮನಪರಿವರ್ತನೆ ಮಾಡಿಕೊಂಡಿರುವ ಮಾಲೀಕರು ಗೋದಾಮಿನಿಂದ ಆಹಾರಧಾನ್ಯ ಎತ್ತುವಳಿ ಮಾಡಲು ಮುಂದಾಗಿದ್ದಾರೆ.

ಖಡಕ್‌ ನಿರ್ಧಾರ: 10 ಅಂಗಡಿಗಳ ಪರವಾನಿಗೆ ಅಮಾನತ್ತುಗೊಳಿಸಿದ್ದ ವರದಿಯೂ ನ.8ರಂದು “ಉದಯವಾಣಿ’ ಸಮಗ್ರ ವರದಿ ಪ್ರಕಟಿಸಿದ್ದರಿಂದ ಜಿಲ್ಲೆಯಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಆಹಾರ ಇಲಾಖೆ ಸಚಿವ ಗೋಪಾಲಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಾಮಾಜಿಕ ಜಾಲತಾಣ ಮೂಲಕ ಗಮನ ಸೆಳೆಯುವಂತಹ ಕೆಲಸ ಮಾಡಲಾಗಿದೆ. ಒಟ್ಟಾರೆ ಆಹಾರ ಇಲಾಖೆಯ ಉಪ ನಿರ್ದೇಶಕರು ಕೈಗೊಂಡ ಖಡಕ್‌ ನಿರ್ಧಾರದಿಂದ ಬಿರುಗಾಳಿ ಎಬ್ಬಿಸಿದೆ.

ಅಮಾನತು ಆದೇಶ ಹಿಂಪಡೆದಿಲ್ಲ: ಸವಿತಾ :  ಗೋದಾಮಿನಿಂದ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಲು ನಿರ್ಲಕ್ಷ್ಯ ವಹಿಸಿರುವ10 ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ಅಮಾನತುಗೊಳಿಸಿದ್ದೇವೆ. ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸುಮಾರು27 ಅಂಗಡಿ ಮಾಲೀಕರು ಆಹಾರಧಾನ್ಯಗಳನ್ನು ಎತ್ತುವಳಿ ಮಾಡಿದ್ದಾರೆ ಎಂದು ಆಹಾರ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪನಿರ್ದೇಶಕಿ ಪಿ.ಸವಿತಾ ತಿಳಿಸಿದರು. ಈ ಸಂಬಂಧ ಉದಯವಾಣಿಗೆ ಪ್ರತಿಕ್ರಿಯಿಸಿದ ಅವರು,ಕ್ಷೇತ್ರದ ಶಾಸಕರು ಸಮಸ್ಯೆಕುರಿತು ಸಮಾಲೋಚನೆ ನಡೆಸಿದ್ದಾರೆ. ಜಿಲ್ಲಾಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅವರ ಆದೇಶದ ಮೇರೆಗೆ ಮುಂದಿನಕ್ರಮಕೈಗೊಳ್ಳುತ್ತೇವೆ. ಪ್ರಸ್ತುತ ಅಮಾನತ್ತುಗೊಳಿಸಿರುವ ಆದೇಶವನ್ನು ವಾಪಸ್ಸು ಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

ಅಧಿಕಾರಿಗಳಿಂದ ಸಂಘ ವಿಭಜಿಸುವ ಹುನ್ನಾರ :  ಕ್ಷೇತ್ರದ ಶಾಸಕರ ಸಲಹೆ ಮೇರೆಗೆ ಗೋದಾಮಿನಿಂದ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಿ ನಾಗರಿಕರಿಗೆ ವಿತರಿಸಲುಕ್ರಮಕೈಗೊಂಡಿದ್ದೇವೆ. ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಮಾಲೀಕರು ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಅಸಭ್ಯವಾಗಿ ವರ್ತಿಸಿಲ್ಲ. ಜೊತೆಗೆ ಅವಹೇಳನೆ ಸಹ ಮಾಡಿಲ್ಲ ಎಂದು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದರು. ಈ ಸಂಬಂಧ ಉದಯವಾಣಿಗೆ ಪ್ರತಿಕ್ರಿಯಿಸಿದ ಅವರು, ಆಹಾರ ಇಲಾಖೆಯ ಅಕಾರಿಗಳ ಕಾರ್ಯವೈಖರಿ ವಿರೋಧಿಸಿದ್ದೇವೆ. ಅಧಿಕಾರಿಗಳು ಸಂಘವನ್ನು ಒಡೆಯುವ ಹುನ್ನಾರ ನಡೆಸಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗಬಾರದೆಂದು ಆಹಾರಧಾನ್ಯ ಎತ್ತುವಳಿ ಮಾಡಿದ್ದೇವೆ ಎಂದು ತಿಳಿಸಿದರು.

25 ಅಂಗಡಿ ಮಾಲೀಕರರಿಂದ ಎತ್ತುವಳಿ :  ಅಂಗಡಿ ಮಾಲೀಕರ ಪರವಾನಿಗೆ ಅಮಾನತುಗೊಳಿಸಿದ ಬಳಿಕ ಶಾಸಕರ ಮಧ್ಯೆ ಪ್ರವೇಶದಿಂದ ಸಮಸ್ಯೆ ಇತ್ಯರ್ಥವಾಗುವ ಲಕ್ಷಣಗಳುಕಂಡು ಬರುತ್ತಿದ್ದು, ಈಗಾಗಲೇ ಸುಮಾರು25 ರಿಂದ27 ಮಂದಿಗೆ ಗೋದಾಮಿನಿಂದ ಆಹಾರ ಧಾನ್ಯಗಳನ್ನು ಎತ್ತುವಳಿ ಮಾಡಿದ್ದಾರೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಗೌರಿಬಿದನೂರು ತಾಲೂಕಿನಲ್ಲಿ111 ಸರ್ಕಾರಿ ನ್ಯಾಯಬೆಲೆ ಅಂಗಡಿಗಳಿದ್ದು, ಮುಂದಿನ ವಾರದೊಳಗೆ ಎಲ್ಲಾ ಅಂಗಡಿ ಮಾಲೀಕರು ಆಹಾರಧಾನ್ಯವನ್ನು ಎತ್ತುವಳಿ ಮಾಡುವ ಸಾಧ್ಯತೆಯಿದೆ.

ಆಹಾರ ಇಲಾಖೆ ಅಧಿಕಾರಿಗಳು ಮತ್ತು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಮಾಡಿದ್ದೇನೆ. ಅಂಗಡಿಗಳ ಪರವಾನಿಗೆ ಅಮಾನತು ಆದೇಶ ವಾಪಸ್ಸು ಪಡೆಯಲು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕ್ಷೇತ್ರದಲ್ಲಿ ಬಡವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿಕ್ರಮ ಕೈಗೊಳ್ಳಲಾಗಿದೆ. ಎನ್‌.ಎಚ್‌.ಶಿವಶಂಕರ್‌ರೆಡ್ಡಿ, ಶಾಸಕರು ಗೌರಿಬಿದನೂರು ಕ್ಷೇತ್ರ

Advertisement

Udayavani is now on Telegram. Click here to join our channel and stay updated with the latest news.

Next