Advertisement
ಧಾರ್ಮಿಕ ಸ್ಥಳಗಳಲ್ಲಿ ದುರಂತಗಳು ಸಂಭವಿಸುವುದು ನಮ್ಮ ದೇಶದಲ್ಲಿ ಹೊಸತೇನಲ್ಲ. ಬಹುತೇಕ ದುರಂತಗಳಿಗೆ ನಮ್ಮ ದೋಷಪೂರಿತ ವ್ಯವಸ್ಥೆಯೇ ಕಾರಣವಾಗಿರುತ್ತದೆ. ದೇವಸ್ಥಾನ ಅಥವಾ ಇನ್ಯಾವುದೇ ಧಾರ್ಮಿಕ ಕೇಂದ್ರಗಳಿಗೆ ಜನರು ಬರುವುದು ಆ ಸ್ಥಳದ ಮೇಲಿರುವ ನಂಬಿಕೆಯಿಂದ. ಇಂಥ ಸ್ಥಳಗಳಲ್ಲಿ ಯಾರಧ್ದೋ ನಿರ್ಲಕ್ಷ್ಯ ಅಥವಾ ಸಂಚಿನಿಂದ ದುರಂತ ಸಂಭವಿಸಿ ಪ್ರಾಣಹರಣವಾದರೆ ಅದರಿಂದ ಜನರ ನಂಬಿಕೆಗೆ ಕೊಡಲಿಯೇಟು ಬೀಳುತ್ತದೆ.ಕಳೆದ ಕೆಲ ಸಮಯದಿಂದೀಚೆಗೆ ಕರ್ನಾಟಕದಲ್ಲಿ ಸರಣಿಯಂತೆ ದುರಂತಗಳು ಸಂಭವಿಸಿ ಸಾವುನೋವುಗಳಾಗುತ್ತಿವೆ. ಮೂರು ವಾರಗಳ ಹಿಂದೆಯೆಷ್ಟೇ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬಸ್ ನಾಲೆಗೆ ಉರುಳಿ 30 ಮಂದಿ ಅಸುನೀಗಿದ್ದಾರೆ. ರವಿವಾರ ಸಕ್ಕರೆ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ಆರು ಮಂದಿ ಮೃತಪಟ್ಟಿದ್ದಾರೆ. ಇಂಥ ದುರಂತಗಳು ಸಂಭವಿಸಿದಾಗ ರಾಜಕಾರಣಿಗಳ ದಂಡೇ ಸ್ಥಳಕ್ಕೆ ಮತ್ತು ಆಸ್ಪತ್ರೆಗಳಿಗೆ ಭೇಟಿ ನೀಡುತ್ತದೆ. ತಪ್ಪಿತಸ್ಥರನ್ನು ಶಿಕ್ಷಿಸುವ ಕುರಿತು ಮಾತನಾಡುತ್ತಾರೆ. ಪರಿಹಾರ ಧನ ಘೋಷಣೆಯಾಗುತ್ತದೆ. ಮಾಧ್ಯಮಗಳಲ್ಲಿ ಬಿರುಸಿನ ಚರ್ಚೆಯಾಗುತ್ತದೆ. ಎಲ್ಲಾ ನಾಲ್ಕೈದು ದಿನ ಮಾತ್ರ.ಕ್ರಮೇಣ ಜನರು ದುರಂತವನ್ನು ಮರೆಯುತ್ತಾರೆ. ಇನ್ನೊಂದು ದುರಂತ ಸಂಭವಿಸಿದಾಗಲಷ್ಟೇ ಜನರಿಗೆ ಮಾತ್ರವಲ್ಲ ನಮ್ಮನ್ನಾಳುವವರಿಗೆ ಕೂಡಾ ಅದರ ನೆನಪಾಗುತ್ತದೆ. ಇದು ಲಾಗಾಯ್ತಿನಿಂದ ನಡೆದುಕೊಂಡು ಬಂದಿರುವ ರೀತಿ.
ದಸರಾ ಹಬ್ಬದ ಸಂದರ್ಭದಲ್ಲಿ ಪಂಜಾಬಿನಲ್ಲಿ ಸಂಭವಿಸಿದ ದುರಂತವಾಗಲಿ, ಎರಡು ವರ್ಷದ ಹಿಂದೆ ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನದ ಉತ್ಸವವೊಂದರಲ್ಲಿ ಸಂಭವಿಸಿದ ಪಟಾಕಿ ದುರಂತವಾಗಲಿ ನಮಗೆ ಯಾವುದೇ ಪಾಠ ಕಲಿಸಿಲ್ಲ ಎನ್ನುವುದು ಪದೇ ಪದೇ ಸಾಬೀತಾಗುತ್ತಿ ರುತ್ತದೆ. ಅಪಾರ ಸಂಖ್ಯೆಯ ಜನರು ಸೇರುವ ಧಾರ್ಮಿಕ ಸ್ಥಳಗಳಲ್ಲಿ ಜನದಟ್ಟಣೆ ನಿಭಾಯಿಸುವ ನಮ್ಮ ವ್ಯವಸ್ಥೆಯೇ ಸಮರ್ಪಕವಾಗಿಲ್ಲ ಎನ್ನುವುದಕ್ಕೆ ದೇಶದಲ್ಲಿ ಸಂಭವಿಸಿರುವ ಅನೇಕ ಕಾಲು¤ಳಿತಗಳೇ ಸಾಕ್ಷಿ. ದೇಗುಲಗಳು ಸೇರಿದಂತೆ ಧಾರ್ಮಿಕ ಸ್ಥಳಗಳು ಧಾರಾಳ ವರಮಾನ ತಂದು ಕೊಡುವ ಸ್ಥಳಗಳು. ಹೀಗಾಗಿ ದೇವಸ್ಥಾನಗಳ ಆಡಳಿತ ನೋಡಿ ಕೊಳ್ಳಲು ಭಾರೀ ಪೈಪೋಟಿ ಇರುತ್ತದೆ. ಪ್ರಸ್ತುತ ಸುಳುವಾಡಿಯ ದೇಗುಲ ದಲ್ಲಿ ಸಂಭವಿಸಿದ ದುರಂತಕ್ಕೆ ದೇಗುಲದ ಆಡಳಿತವನ್ನು ನೋಡಿಕೊಳ್ಳುವ ವಿಚಾರವಾಗಿ ಎರಡು ತಂಡಗಳ ನಡುವೆ ಇದ್ದ ವಿವಾದವೇ ಕಾರಣ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಕಾರಣ. ಮುಜರಾಯಿ ಇಲಾಖೆಯ ವಶದಲ್ಲಿರುವ ದೇವಸ್ಥಾನಗಳಲ್ಲಿ ಈ ಸಮಸ್ಯೆ ಇಲ್ಲದಿದ್ದರೂ, ಇತರ ದೇವಸ್ಥಾನಗಳಲ್ಲಿ ಆಡಳಿತ ನೋಡಿಕೊಳ್ಳುವ ವಿಚಾರವೇ ಮಾರಾಮಾ ರಿಗೆ ಕಾರಣವಾದ, ಕೋರ್ಟುಕಚೇರಿಯೇರಿದ ಪ್ರಕರಣಗಳು ಅನೇಕ ಇವೆ.
Related Articles
Advertisement