Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆಗಸ್ಟ್ ಮೊದಲ ವಾರದವರೆಗೆ ವಾಡಿಕೆಯಂತೆ 522 ಮಿ.ಮೀ. ಮಳೆಯಾಗುತ್ತದೆ. ಈ ವರ್ಷ 505 ಮಿ.ಮೀಟರ್ ಮಳೆಯಾಗಿದೆ. ಈ ವರ್ಷ 110 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆಯ ಗುರಿ ಹೊಂದಲಾಗಿದ್ದು, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಆಹಾರ ಉತ್ಪಾದನೆಯಲ್ಲಿ ಕುಂಠಿತವಾಗುವ ಸಾಧ್ಯತೆ ಇದೆ ಎಂದು ಹೇಳಿದರು.
Related Articles
Advertisement
ಮುಂಗಾರು ಹಂಗಾಮಿಗೆ 8.60 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳ ಅಗತ್ಯವಿದ್ದು, 7.97 ಲಕ್ಷ ಕ್ವಿಂಟಾಲ್ ವಿವಿಧ ಬಿತ್ತನೆ ಬೀಜಗಳ ಲಭ್ಯವಿದೆ. ಇದುವರೆಗೂ 3.63 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ವಿತರಿಸಲಾಗಿದೆ. ಇನ್ನೂ 4.30 ಲಕ್ಷ ಕ್ವಿಂಟಾಲ್ ಬೀಜ ದಾಸ್ತಾನಿದೆ. ಮುಂಗಾರು ಹಂಗಾಮಿಗೆ ಅಗತ್ಯವಿರುವಷ್ಟು ರಸಗೊಬ್ಬರ ಸಂಗ್ರಹಿಸಿಡಲಾಗಿದೆ. ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ 8 ಜಿಲ್ಲೆಗಳಲ್ಲಿ 6309 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬಾಡಿರುವ ವರದಿಯಾಗಿದೆ ಎಂದರು.
ಬೆಳೆಗಳ ಪರಿಸ್ಥಿತಿ ಅಧ್ಯಯನ ಮಾಡಲು ಡ್ರೋನ್ ಮೂಲಕ ಸರ್ವೆ ಮಾಡಲು ಚಿಂತಿಸಲಾಗಿದ್ದು, ಡ್ರೋನ್ ಮೂಲಕ ಒಂದು ದಿನದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಸಮೀಕ್ಷೆ ನಡೆಸಬಹುದು. ಡ್ರೋನ್ ಮೂಲಕ ಬೆಳೆ ಸಮೀಕ್ಷೆಗೆ ಸುಮಾರು 15 ಕೋಟಿ ರೂ. ವೆಚ್ಚವಾಗಲಿದೆ.– ಎನ್.ಎಚ್.ಶಿವಶಂಕರರೆಡ್ಡಿ ನೀಲಗಿರಿ ಬದಲು ಬಿದಿರು
ರಾಜ್ಯದಲ್ಲಿ ನೀಲಗಿರಿ ಬೆಳೆಯನ್ನು ನಿಷೇಧ ಮಾಡಲಾಗಿದ್ದು ಅದಕ್ಕೆ ಪರ್ಯಾಯವಾಗಿ ರೈತರಿಗೆ ಬ್ಯಾಂಬೂ (ಬಿದಿರು) ಬೆಳೆಯಲು ಪ್ರೋತ್ಸಾಹಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ ಸಚಿವರು, ಪರಿಸರ ಸ್ನೇಹಿಯಾಗಿರುವ ಎಲಿಫೆಂಟ್ ಆಫ್ ಬ್ಯಾಂಬೂ ಮರಗಳನ್ನು ಬೆಳೆಯುವುದರಿಂದ ರೈತರಿಗೆ ಹೆಚ್ಚಿನ ಆದಾಯ ಬರಲಿದೆ. ಮೂರು ವರ್ಷದಲ್ಲಿ ಬ್ಯಾಂಬು ಬೆಳೆ ಬರಲಿದ್ದು ಪ್ರತಿ ಎಕರೆಗೆ ಕನಿಷ್ಠ 3 ರಿಂದ 3.5 ಲಕ್ಷ ರೂ. ಆದಾಯ ಪಡೆಯಬಹುದು. ಆರಂಭದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಬಿದಿರು ಬೆಳೆಯಲಾಗುವುದು ಎಂದು ತಿಳಿಸಿದರು.