Advertisement

ಪಾಕ್‌ ಧ್ವಜ ತುಳಿದು ಪ್ರತಿಭಟನೆ

10:02 AM Feb 16, 2019 | Team Udayavani |

ದಾವಣಗೆರೆ: ಶ್ರೀನಗರ-ಜಮ್ಮು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಅವಂತಿಪೋರಾದಲ್ಲಿ ಗುರುವಾರ ಜೈಶ್‌-ಎ- ಮೊಹಮ್ಮದ್‌ ಉಗ್ರರು ನಡೆಸಿದ ಪೈಶಾಚಿಕ ಕೃತ್ಯ ಖಂಡಿಸಿ ನಗರದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಜಯದೇವ ವೃತ್ತದಲ್ಲಿ ಶುಕ್ರವಾರ ಜಮಾಯಿಸಿದ ಕಾರ್ಯಕರ್ತರು, ಭಾರತೀಯ ಸಿಆರ್‌ಪಿಎಫ್‌ನ 44ಕ್ಕೂ ಹೆಚ್ಚು ಸೈನಿಕರು ಉಗ್ರರ ಅಟ್ಟಹಾಸಕ್ಕೆ ಬಲಿಯಾಗಿರುವುದನ್ನು ತೀವ್ರವಾಗಿ ಖಂಡಿಸಿ ಪಾಕಿಸ್ತಾನ ಧ್ವಜ ತುಳಿದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸೇನೆಯ ರಾಜ್ಯ ಸಂಪರ್ಕ ಪ್ರಮುಖ್‌ ಪರಶುರಾಮ್‌ ನಡುಮನಿ ಮಾತನಾಡಿ, ಉಗ್ರರು ಭಾರತೀಯ ಸೇನೆ ಮೇಲೆ ದಾಳಿ ನಡೆಸುವ ಬಗ್ಗೆ
ಗುಪ್ತಚರ ಇಲಾಖೆಗೆ ಪೂರ್ವದಲ್ಲೇ ಮಾಹಿತಿ ಇದ್ದರೂ ಕೂಡ ನಿರ್ಲಕ್ಷ್ಯ ವಹಿಸಿರುವುದು ನಿಜಕ್ಕೂ ಶೋಚನಿಯ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಈ ಕೂಡಲೇ ಪಾಕಿಸ್ತಾನದ ಮೇಲೆ ಯುದ್ಧ ಸಾರಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಂದೂಗಳ ವೋಟು ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪ್ರಮುಖ್‌ ಶ್ರೀಧರ್‌ ಪಟೇಲ್‌, ಮಾಧ್ಯಮ ಪ್ರಮುಖ್‌ ವಿನೋದ್‌ ರಾಜ್‌, ಮತ್ತಿ ಕುಮಾರ್‌, ನೂತನ್‌ ಆಚಾರ್ಯ ಇತರೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next