Advertisement

Arrested: ರಸ್ತೆ ಅಪಘಾತದಲ್ಲಿ ಫುಟ್‌ಬಾಲ್‌ ಆಟಗಾರ ಸಾವು; ಲಾರಿ ಡ್ರೈವರ್‌ ಸೆರೆ

12:50 PM Feb 14, 2024 | Team Udayavani |

ಬೆಂಗಳೂರು: ಕೆ.ಆರ್‌.ಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ರಸ್ತೆ ಅಪಘಾತದಲ್ಲಿ ರಾಜ್ಯ ಮಟ್ಟದ ಫ‌ುಟ್‌ಬಾಲ್‌ ಆಟಗಾರನ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕನನ್ನು ಕೆ.ಆರ್‌.ಪುರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ವಿಜಯಪುರ ಮೂಲದ ಮಂಜುನಾಥ್‌ (29) ಬಂಧಿತ ಆರೋಪಿ. ಜ.21ರಂದು ತಡರಾತ್ರಿ ಠಾಣೆ ವ್ಯಾಪ್ತಿಯ ರಾಮಮೂರ್ತಿ ನಗರ ಮೇಲ್ಸೇತುವೆ ಬಳಿ ನಗರದ ಬಾಬುಸಾಬ್‌ಪಾಳ್ಯ ನಿವಾಸಿ, ಫ‌ುಟ್‌ಬಾಲ್‌ ಆಟಗಾರ ಕೆ.ಮೊನೀಶ್‌ (27) ಬೈಕ್‌ನಲ್ಲಿ ಹೋಗುವಾಗ, ಹಿಂದಿನಿಂದ ಅತೀವೇಗವಾಗಿ ಬಂದ ಲಾರಿ ಚಾಲಕ ಮಂಜುನಾಥ್‌ ಬೈಕ್‌ಗೆ ಡಿಕ್ಕಿ ಹೊಡೆದು, ಪರಾರಿಯಾಗಿದ್ದ. ಘಟನೆ ಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೊನೀಶ್‌ ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫ‌ಲ ಕಾರಿಯಾಗದೆ ಮೃತಪ್ಟಟಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸಂಚಾರ ಪೊಲೀಸರು, ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ವಿಜಯಪುರದಲ್ಲಿ ಬಂಧಿಸಿದ್ದಾರೆ. ಮೊನೀಶ್‌ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next