Advertisement

BJPಗೆ IT,CBI,ED ಬಜರಂಗದಳ,RSS ಇದ್ದಂತೆ: ದಿನೇಶ್‌ ಗುಂಡುರಾವ್‌ ಕಿಡಿ

03:40 PM Aug 02, 2017 | |

ಬೆಂಗಳೂರು : ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಗುರಿಯಾಗಿರಿಸಿಕೊಂಡು ಭಾರಿ ಐಟಿ ದಾಳಿ ನಡೆಸಿರುವ ವಿರುದ್ಧ ಕಾಂಗ್ರೆಸ್‌ ಪಕ್ಷ ಕೆಂಡಾಮಂಡಲವಾಗಿದೆ. ‘ಆದಾಯ ತೆರಿಗೆ ಇಲಾಖೆ, ಸಿಬಿಐ ,ಜಾರಿ ನಿರ್ದೇಶನಾಲಯ ಎನ್ನುವುದು ಬಿಜೆಪಿಗೆ ಆರ್‌ಎಸ್‌ಎಸ್‌, ಬಜರಂಗ ದಳ,ಎಬಿವಿಪಿ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡುರಾವ್‌ ಕಿಡಿ ಕಾರಿದ್ದಾರೆ. 

Advertisement

ಐಟಿ ದಾಳಿ ನಡೆದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಿನೇಶ್‌ ಗುಂಡುರಾವ್‌ ‘ಐಟಿ, ಸಿಬಿಐಗಳು ಮೋದಿ ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿವೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಗಮನಕ್ಕೆ ಬರದಂತೆ ಸಿಆರ್‌ಪಿಎಫ್ ಪಡೆಗಳನ್ನು ಕಳುಹಿಸಿ ದಾಳಿ ನಡೆಸಿದೆ’ಎಂದರು. 

‘ಆಪರೇಷನ್‌ ಕಮಲ ಮಾಡುತ್ತಿರುವ ಹಿನ್ನಲೆಯಲ್ಲಿ ಗುಜರಾತ್‌ನ ಶಾಸಕರನ್ನು ಕರೆಸಿ ರೆಸಾರ್ಟ್‌ನಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಅದು ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರವಾಗಿತ್ತು. ಇದನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ.ಮೋದಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ಮೋದಿ ಟಿ.ವಿ.ಚಾನೆಲ್‌ಗ‌ಳನ್ನು ಖರೀದಿ ಮಾಡಿದ್ದಾರೆ. ಅವರು ಐಟಿ ದಾಳಿ ವಿಚಾರವನ್ನೇ ಹೆಚ್ಚು ಹೆಚ್ಚು ಪ್ರಸಾರ ಮಾಡಲು ಹೇಳಿ ದೇಶಾದ್ಯಂತ ಚರ್ಚೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು. 

Advertisement

Udayavani is now on Telegram. Click here to join our channel and stay updated with the latest news.

Next