Advertisement

ನಟಿ ಕಂಗನಾ ಅರ್ಜಿ ವಜಾ

01:29 AM Sep 10, 2021 | Team Udayavani |

ಮುಂಬಯಿ: ಚಿತ್ರ ಸಾಹಿತಿ ಜಾವೇದ್‌ ಅಖ್ತರ್‌ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಬಾಲಿವುಡ್‌ ನಟಿ ಕಂಗನಾ ರಣಾವತ್‌ ಹಿನ್ನಡೆ ಅನುಭವಿಸಿದ್ದಾರೆ.

Advertisement

ತಮ್ಮ ವಿರುದ್ಧದ ಪ್ರಕರಣ ರದ್ದು ಮಾಡುವಂತೆ ಕೋರಿ ಕಂಗನಾ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಗುರುವಾರ ವಜಾ ಮಾಡಿದೆ.

ಸುದ್ದಿವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಕಂಗನಾ ಅವರು ಅಖ್ತರ್‌ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ವರ್ಷದ ನವೆಂಬರ್‌ನಲ್ಲಿ ಕಂಗನಾ ವಿರುದ್ಧ ಜಾವೇದ್‌ ಮಾನನಷ್ಟ ಮೊಕದ್ದಮೆ ಹೂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next