Advertisement

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

10:19 PM Mar 28, 2024 | Team Udayavani |

ಚಿಕ್ಕಮಗಳೂರು: ಉಡುಪಿ- ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದೇ ಗೊಂದಲವಿಲ್ಲ. ಸಂಸದರಿಗೆ ಕೆಲಸ ಮುಖ್ಯವೇ ಹೊರತು ಭಾಷೆಯಲ್ಲ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಪ್ರಮೋದ್‌ ಮಧ್ವರಾಜ್‌ ತಿಳಿಸಿದರು.

Advertisement

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ವಾತಾವರಣ ಸೃಷ್ಟಿಯಾಗಿದೆ. ಎರಡು ಜಿಲ್ಲೆಗಳ ಪಕ್ಷದ ಪದಾಧಿ ಕಾರಿಗಳು ಹಾಗೂ ಕಾರ್ಯಕರ್ತರು ತಕರಾರು ಇಲ್ಲದೆ ಬೆಂಬಲಿಸುತ್ತಿದ್ದಾರೆ ಎಂದು ಹೇಳಿದರು.

ಪ್ರಚಾರ ಕಾರ್ಯ ಆರಂಭಗೊಂಡಿದ್ದು, ಗೆಲ್ಲುವುದು ನಿಶ್ಚಿತವಾಗಿದೆ. 5 ಲಕ್ಷ ಮತಗಳ ಅಂತರದ ಗೆಲುವನ್ನು ದಾಖಲಿಸಲು ಶ್ರಮಿಸುತ್ತಿದ್ದೇವೆ. ಸರಳ, ಸಾತ್ವಿಕರಾಗಿರುವ  ಕೋಟ ಶ್ರೀನಿವಾಸ ಪೂಜಾರಿಯವರು ಪಂಚಾಯತ್‌ ಮಟ್ಟದಿಂದ ಕೆಲಸ ಮಾಡಿದ್ದಾರೆ. ಈಗ ಅವರಿಗೆ ಲೋಕಸಭಾ ಚುನಾವಣೆ ಟಿಕೆಟ್‌ ದೊರೆತಿದೆ ಎಂದರು.

ಕಳೆದ ತಿಂಗಳು ಜಿಲ್ಲೆಯಲ್ಲಿ ಸುತ್ತಾಡಿದಾಗ ಶ್ರೀಕಂಠಪ್ಪನವರ ಬಗ್ಗೆ ಜನರು ಒಳ್ಳೆಯ ಮಾತುಗಳನ್ನಾಡಿದ್ದರು. ಅವರನ್ನೇ ಹೋಲುವ ವ್ಯಕ್ತಿ ಶ್ರೀನಿವಾಸ ಪೂಜಾರಿಯವರಾಗಿದ್ದಾರೆ. ಜನರ ಕೈಗೆ ಸುಲಭವಾಗಿ ಸಿಗಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next