Advertisement

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

12:14 AM Sep 21, 2024 | Team Udayavani |

ಮೈಸೂರು: ನನ್ನನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಕ್ಕಿ ಹಾಕಿಸಲು ರಾಜ್ಯ ಸರಕಾರ ಕಳೆದ 3 ತಿಂಗಳಿನಿಂದ ಪ್ರಯತ್ನ ಮಾಡುತ್ತಿದೆ. ಯಾವ ಪ್ರಕರಣಗಳೂ ಸಿಗದ ಹಿನ್ನೆಲೆಯಲ್ಲಿ ಹಳೇ ಪ್ರಕರಣಕ್ಕೆ ಜೀವ ಕೊಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.

Advertisement

ಪತ್ರಕರ್ತರೊಂದಿಗೆ ಅವರು ಮಾತನಾಡಿ, ಗುರುವಾರ ಸಚಿವರು ಪತ್ರಿಕಾಗೋಷ್ಠಿ ಮಾಡಿರುವುದು ಕಾಂಗ್ರೆಸ್‌ ಟೂಲ್‌ ಕಿಟ್‌. ಯಾರೋ ಅವರಿಗೆ ಸ್ಕ್ರಿಪ್ಟ್ ಕೂಡ ಸರಿಯಾಗಿ ಬರೆದು ಕೊಟ್ಟಿಲ್ಲ. ಅದರಲ್ಲಿ ಅವರೇ ಸಿಕ್ಕಿ ಬೀಳುತ್ತಾರೆ ಎಂದು ಲೇವಡಿ ಮಾಡಿದರು.

ಕೃಷ್ಣಭೈರೇಗೌಡ ನೇತೃತ್ವದಲ್ಲಿ ನಿನ್ನೆ ಸುದ್ದಿಗೋಷ್ಠಿ ಮಾಡಿದ್ದಾರೆ. ನಾನು ಎಲ್ಲೂ ಕದ್ದು ಹೋಗಲ್ಲ. ಸುಳ್ಳು ಹೇಳಿಕೊಂಡು ಬೇರೆಯವರ ನೆರವನ್ನು ತೆಗೆದುಕೊಳ್ಳುವುದಿಲ್ಲ. ನನಗೂ ಆರೋಪ ಮಾಡಿರುವ ಪ್ರಾಪರ್ಟಿಗೂ ಸಂಬಂಧವಿದೆ. ಇಲ್ಲ ಅಂತ ನಾನು ಹೇಳಲ್ಲ. ನನ್ನ ಹೆಂಡತಿಯ ತಾಯಿಯ ಆಸ್ತಿ ಅದಾಗಿದೆ. ಎಂದು ಹೇಳಿದರು.

ನನ್ನ ಪ್ರಕರಣಕ್ಕೂ ಸಿದ್ದರಾಮಯ್ಯ ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸವಿದೆ. ನಾನು ಕೆಟ್ಟ ಕೆಲಸ ಮಾಡಲ್ಲ. ಮಿಸ್ಟರ್‌ ಕೃಷ್ಣಭೈರೇಗೌಡ ನನ್ನ ಅಲುಗಾಡಿಸಲು ಸಾಧ್ಯವಿಲ್ಲ. ಕಂದಾಯ ಇಲಾಖೆಯಲ್ಲಿ ಏನೇನ್‌ ಆಗುತ್ತಿದೆ ಎಂಬುದು ಗೊತ್ತು. ಮುಂದಿನ ದಿನಗಳಲ್ಲಿ ಅದು ಹೊರಗಡೆ ಬರುತ್ತದೆ ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next