Advertisement

5ನೇ ಬಾರಿಯೂ E.D. ವಿಚಾರಣೆಗೆ ದೆಹಲಿ ಸಿಎಂ ಕೇಜ್ರಿವಾಲ್‌ ಗೈರು

09:31 PM Feb 02, 2024 | Team Udayavani |

ನವದೆಹಲಿ: ಅಬಕಾರಿ ಹಗರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) 5ನೇ ಸಮನ್ಸ್‌ ನೀಡಿದರೂ ಲೆಕ್ಕಿಸದೇ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಶುಕ್ರವಾರವೂ ವಿಚಾರಣೆ ತಪ್ಪಿಸಿಕೊಂಡಿದ್ದಾರೆ. ಈ ಹಿಂದೆಯೂ 4 ಬಾರಿ ಸಮನ್ಸ್‌ ನೀಡಿದರೂ ಕೇಜ್ರಿವಾಲ್‌ ಹಾಜರಾಗಿರಲಿಲ್ಲ.

Advertisement

ಈ ಕುರಿತಂತೆ ಆಪ್‌ ಪ್ರತಿಕ್ರಿಯೆ ನೀಡಿದ್ದು, ಇ.ಡಿ. ಅಧಿಕಾರಿಗಳು ಕೇಜ್ರಿವಾಲ್‌ ಅವರನ್ನು ಬಂಧಿಸುವ ಉದ್ದೇಶದಿಂದ ಪದೇ ಪದೆ ಸಮನ್ಸ್‌ ನೀಡುತ್ತಿದ್ದಾರೆ. ನಾವು ಪ್ರತಿ ಬಾರಿಯೂ ಸಮನ್ಸ್‌ ಸಂಬಂಧಿಸಿದಂತೆ ಕೆಲ ಪ್ರಶ್ನೆಗಳನ್ನು ಅಧಿಕಾರಿಗಳಿಗೆ ಕೇಳುತ್ತಲೇ ಇದ್ದೇವೆ. ಆದರೆ, ಅಧಿಕಾರಿಗಳು ಯಾವುದೇ ಉತ್ತರ ನೀಡದೇ ಸುಮ್ಮನೆ ಸಮನ್ಸ್‌ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next