Advertisement

ಭೂ ಸುಧಾರಣೆ ಕಾಯ್ದೆ ಹಿಂಪಡೆಯಲು ಒತ್ತಾಯ

12:29 PM Jan 26, 2022 | Team Udayavani |

ಜೇವರ್ಗಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ಹಿಂದಕ್ಕೆ ಪಡೆಯುವಂತೆ ಹಾಗೂ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ, ಸಿಪಿಐ (ಎಂ), ಸಿಪಿಐ (ಎಂಎಲ್‌), ಎಐಎಫ್‌ಬಿ, ಆರ್‌ ಪಿಐ, ಸ್ವರಾಜ್‌ ಇಂಡಿಯಾ ಸಂಘಟನೆಗಳ ವತಿಯಿಂದ ತಾಲೂಕಿನ ಕೆಲ್ಲೂರ ಗ್ರಾಮದಲ್ಲಿ ಮನೆ-ಮನೆಯಿಂದ ಎನ್ನುವ ವಿನೂತನ ಪ್ರತಿಭಟನೆ ನಡೆಸಲಾಯಿತು.

Advertisement

ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು, ಲಾಕ್‌ಡೌನ್‌-ವೀಕೆಂಡ್‌ ಕರ್ಫ್ಯೂ ಸಂತ್ರಸ್ತರಿಗೆ ಪರಿಹಾರ ನೀಡಿ, ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್‌ ವಿತರಿಸಬೇಕು. ಮನೆ ಆರೈಕೆಯಲ್ಲಿರುವ ಕೋವಿಡ್‌ ಸೋಂಕಿತರಿಗೆ ನೆರವು ನೀಡಬೇಕು. ಕೋವಿಡ್‌ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಿ, ಮೃತರಿಗೆ ಪರಿಹಾರ ನೀಡಬೇಕು. ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ನೇರ ಹಣ ವರ್ಗಾವಣೆ ಮಾಡಬೇಕು. ತಲಾ 10 ಕೆ.ಜಿ ಉಚಿತ ಪಡಿತರ ನೀಡಬೇಕು. ಶಾಲೆ-ಕಾಲೇಜಿನ ಶುಲ್ಕ ಮನ್ನಾ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯಬೇಕು. 200 ದಿನಗಳ ಉದ್ಯೋಗ ಖಾತ್ರಿ ಒದಗಿಸಿ, ನಗರದಲ್ಲೂ ಖಾತ್ರಿ ಯೋಜನೆ ಜಾರಿಗೊಳಿಸಬೇಕು ಎಂದು ಭಾರತ ಕಮ್ಯುನಿಸ್ಟ್‌ ಪಕ್ಷದ ಮುಖಂಡ ಸುಭಾಷ ಹೊಸಮನಿ ಆಗ್ರಹಿಸಿದರು.

ಕಮ್ಯುನಿಸ್ಟ್‌ ಪಕ್ಷದ ಮಹಾದೇವ ಕೆಲ್ಲೂರ, ಮಲ್ಲಿಕಾರ್ಜುನ ದೊಡ್ಡಮನಿ, ಶಿವು, ಮಲ್ಲಿಕಾರ್ಜುನ ಕೆಲ್ಲೂರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next