Advertisement

ವಿದೇಶಿಯರಿಗೆ ಶೀಘ್ರ ಗ್ರೀನ್‌ಸಿಗ್ನಲ್‌

01:17 AM Sep 20, 2021 | Team Udayavani |

ಹೊಸದಿಲ್ಲಿ: ಕೊರೊನಾ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆ ಯಲ್ಲಿ ವಿದೇಶಿ ಪ್ರವಾಸಿಗರಿಗೆ ದೇಶ ಪ್ರವಾಸಕ್ಕೆ ಅನುಮತಿ ನೀಡುವ ಸಾಧ್ಯತೆಗಳು ಇವೆ.

Advertisement

ದೇಶದಲ್ಲಿ ಸೋಂಕು ಕಾಣಿಸಿಕೊಂಡು ಒಂದೂವರೆ ವರ್ಷಗಳ ಬಳಿಕ ಇಂಥ ನಿರ್ಧಾರ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗುತ್ತಿದೆ. ಲಾಕ್‌ಡೌನ್‌ನಿಂದಾಗಿ ನೆಲಕಚ್ಚಿರುವ ಪ್ರವಾಸೋದ್ಯಮ ಕ್ಷೇತ್ರದ ಚೇತರಿಕೆಗಾಗಿ ಮೊದಲ ಐದು ಲಕ್ಷ ಪ್ರವಾಸಿಗರಿಗೆ ಉಚಿತ  ಪ್ರವಾಸಿ ವೀಸಾ ನೀಡಲು ನಿರ್ಧರಿಸಲಾಗಿದೆ. ಹತ್ತು ದಿನಗಳಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗುತ್ತದೆ. ಇದೇ ವೇಳೆ, ಶನಿವಾರದಿಂದ ರವಿವಾರಕ್ಕೆ ದೇಶಾದ್ಯಂತ 30,773 ಕೊರೊನಾ ಪ್ರಕರಣ ಪತ್ತೆಯಾಗಿದ್ದು, 309 ಮಂದಿ ಸಾವಿಗೀಡಾಗಿದ್ದಾರೆ. ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಲಸಿಕೆಗೆ “ತುರ್ತು ಬಳಕೆ ಮಾನ್ಯತೆ’ ನೀಡುವ ಕುರಿತು ಅ.6ರಂದು ನಡೆಯುವ ವಿಶ್ವ ಆರೋಗ್ಯ ಸಂಸ್ಥೆಯ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next