Advertisement

ಮಲವಂತಿಗೆ: ಕಾಡಾನೆ ದಾಳಿ, ಕೃಷಿ ಹಾನಿ

11:01 AM Apr 22, 2018 | Team Udayavani |

ಬೆಳ್ತಂಗಡಿ: ಕಾಡಾನೆಗಳು ತೋಟಗಳಿಗೆ ನುಗ್ಗಿ ಕೃಷಿಗೆ ಹಾನಿ ಮಾಡಿರುವ ಘಟನೆ ಗುರುವಾರ ರಾತ್ರಿ ಮಲವಂತಿಗೆ ಗ್ರಾ.ಪಂ. ವ್ಯಾಪ್ತಿಯ ಆವರನಂದಿ ಕಾಡಿನ ಬಳಿ ನಡೆದಿದೆ.

Advertisement

ಗುರುವಾರ ರಾತ್ರಿ ಮಳೆ ಸುರಿಯುತ್ತಿದ್ದು, 3 ಕಾಡಾನೆಗಳು ಹಾಗೂ ಒಂದು ಮರಿಯಾನೆ ಚಂದಪ್ಪ ಮಲೆಕುಡಿಯ ಅವರ ತೋಟಕ್ಕೆ ನುಗ್ಗಿದ್ದು, 70ಕ್ಕೂ ಹೆಚ್ಚು ಫಸಲಿಗೆ ಬಂದ ಅಡಿಕೆ, 5 ತೆಂಗು ಹಾಗೂ ಬಾಳೆ ಗಿಡಗಳನ್ನು ನಾಶಪಡಿಸಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಚಾರ್ಮಾಡಿ, ಭೈರತ್ತಿ, ಕುದುರೆಮುಖ ರಕ್ಷಿತಾರಣ್ಯ ಭಾಗದಲ್ಲಿ ಆನೆಗಳು ಓಡಾಡುತ್ತಿದ್ದು, ಆಗಾಗ ಕಡಿರುದ್ಯಾವರ, ಎಳನೀರು ಮೊದಲಾದೆಡೆ ದಾಳಿ ಮಾಡುತ್ತಿವೆ. 3 ತಿಂಗಳ ಹಿಂದೆಯಷ್ಟೇ ಇಲ್ಲಿ ಕಾಡಾನೆಗಳು ದಾಳಿ ಮಾಡಿದ್ದವು.

ಪ್ರಸ್ತುತ ಅವು ಸಮೀಪದ ಕಾಡಿಗೆ ಹಿಂದಿರುಗಿದ್ದು, ಮತ್ತೆ ಆಗಮಿಸುವ ಭಯದಲ್ಲಿ ಸಾರ್ವಜನಿಕರಿದ್ದಾರೆ. ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next