Advertisement

Forest Department ಬೀಟೆ ಮರ ಸಾಗಾಟ: ಆರೋಪಿಗಳ ಸೆರೆ

09:01 PM Sep 16, 2023 | Team Udayavani |

ಮಡಿಕೇರಿ: ವಿರಾಜಪೇಟೆಯ ಕೊಳತ್ತೋಡು ಬೈಗೋಡು ಸಮೀಪ ಬೀಟೆ ಮರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆ ಇಬ್ಬರು ಆರೋಪಿಗಳನ್ನು ಬಂಧಿಸಿ 35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದೆ.

Advertisement

ವಿರಾಜಪೇಟೆಯ ಜೈನರ ಬೀದಿ ನಿವಾಸಿ ಕೆ.ಆರ್‌. ಪ್ರದೀಪ್‌ ಹಾಗೂ ಬಿಟ್ಟಂಗಾಲ ನಿವಾಸಿ ಪಿ.ಎಸ್‌. ಅರ್ಜುನ್‌ ಬಂಧಿತರು.

ವಿರಾಜಪೇಟೆ ಅರಣ್ಯ ವಲಯ ವ್ಯಾಪ್ತಿಯ ಕೊಳತ್ತೋಡು ಬೈಗೋಡು ಗ್ರಾಮದ ಸಮೀಪ ಗೋಣಿಕೊಪ್ಪ -ವಿರಾಜಪೇಟೆ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಬೀಟೆ ಮರದ 50 ನಾಟಗಳನ್ನು ತುಂಬಿಸಿ ಸಾಗಿಸುತ್ತಿದ್ದ ಇಚರ್‌ ವಾಹನವನ್ನು ಅರಣ್ಯ ಇಲಾಖಾ ತಂಡ ವಶಪಡಿಸಿಕೊಂಡು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next