Advertisement

ಮನೆ ಹಕ್ಕುಪತ್ರಕ್ಕಾಗಿ ಅರಣ್ಯ ಇಲಾಖೆ ಕಚೇರಿ ಏರಿದ ಗ್ರಾಪಂ ಉಪಾಧ್ಯಕ್ಷ!

09:59 AM Dec 06, 2019 | Sriram |

ಹೊಸನಗರ: ವಾಸದ ಮನೆ ಹಕ್ಕುಪತ್ರ ಪಡೆಯಲು ಅರಣ್ಯ ಇಲಾಖೆ ಎನ್‌ಒಸಿ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾ.ಪಂ. ಉಪಾಧ್ಯಕ್ಷರೇ ಅರಣ್ಯ ಕಚೇರಿ ಕಟ್ಟಡ ಏರಿ ಪ್ರತಿಭಟಿಸಿದ ಘಟನೆ ತಾಲೂಕಿನ ನಗರ ವಲಯ ಅರಣ್ಯಾಧಿಕಾರಿ ಕಚೇರಿ ಬಳಿ ಬುಧವಾರ ನಡೆದಿದೆ.

Advertisement

ಮೂಡುಗೊಪ್ಪ ಗ್ರಾ.ಪಂ. ವ್ಯಾಪ್ತಿಯ ಸರ್ವೆ ನಂ.220ರಲ್ಲಿ ಸುಮಾರು 128 ಕುಟುಂಬಗಳಿಗೆ ವಾಸದ ಮನೆ ಹಕ್ಕುಪತ್ರ ಪಡೆಯಲು ಅರಣ್ಯ ಇಲಾಖೆ ಎನ್‌ಒಸಿ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾ.ಪಂ. ಉಪಾಧ್ಯಕ್ಷ ಕರುಣಾಕರ ಶೆಟ್ಟಿ ಅವರು ಚಿಕ್ಕಪೇಟೆಯಲ್ಲಿರುವ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ ಏರಿ ಪ್ರತಿಭಟನೆ ನಡೆಸಿದರು.

ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕರುಣಾಕರ ಶೆಟ್ಟಿ ಮನವೊಲಿಸಿ ಮಾತುಕತೆಗೆ ಒಪ್ಪಿಸಿದರು. ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೇ ಕಾರ್ಯ ಚುರುಕುಗೊಳಿಸಿ ಸಮಸ್ಯೆ ಇತ್ಯರ್ಥಕ್ಕೆ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಅನಂತರ ಕರುಣಾಕರ ಶೆಟ್ಟಿ ತಮ್ಮ ಪ್ರತಿಭಟನೆ ಹಿಂಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next