Advertisement

ಕೊಡಗಿಗೆ ಅರಣ್ಯ ಇಲಾಖೆ ತಂಡ

07:00 AM Aug 18, 2018 | Team Udayavani |

ಬೆಂಗಳೂರು: ಕೊಡಗು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ತೊಂದರೆ ಗೊಳಗಾಗಿರುವ ಸಂತ್ರಸ್ತರ ರಕ್ಷಣೆಗೆ ರಾಜ್ಯದ ವಿವಿಧ ಭಾಗಗಳ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ನೆರವನ್ನು ಸರ್ಕಾರ ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೊಡಗು ಜಿಲ್ಲೆಗೆ ಇತರ ಜಿಲ್ಲೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸುವಂತೆ ಅರಣ್ಯ ಸಚಿವ ಆರ್‌.ಶಂಕರ್‌ ಆದೇಶಿಸಿದ್ದಾರೆ.

Advertisement

ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಪರಿಕರಗಳೊಂದಿಗೆ ಕೂಡಲೇ ಕೊಡಗು ಜಿಲ್ಲೆಗೆ ತೆರಳಿ ಜನ ಮತ್ತು ಜಾನುವಾರುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಳ್ಳಬೇಕು.

ವನ್ಯಜೀವಿಗಳ ರಕ್ಷಣೆ ಮತ್ತು ಸ್ಥಳೀಯ ನಿವಾಸಿಗಳಿಗೆ ಅಗತ್ಯ ನೆರವು ನೀಡಬೇಕು. ನಿಯಂತ್ರಣ ಕೊಠಡಿಗಳಿಗೆ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next