Advertisement

ಚಿಕ್ಕಮಗಳೂರು: 100 ಎಕರೆ ಅರಣ್ಯ ಬೆಂಕಿಗಾಹುತಿ, ನೂರಾರು ಮರ ನಾಶ

06:50 PM Feb 27, 2017 | Team Udayavani |

ಚಿಕ್ಕಮಗಳೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಮುದುಗುಣಿ ಅರಣ್ಯದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 100 ಎಕರೆ ಅರಣ್ಯ ಸಂಪತ್ತು ನಾಶವಾಗಿರುವ ಘಟನೆ ಸೋಮವಾರ ನಡೆದಿದೆ.

Advertisement

ಅರಣ್ಯದಲ್ಲಿರುವ ಬೆಲೆಬಾಳುವ ಸಾಗುವಾನಿ ಸೇರಿದಂತೆ ನೂರಾರು ಮರಗಳು ಭಸ್ಮವಾಗಿವೆ. ಬೆಂಕಿಯನ್ನು ನಂದಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸ ಪಡುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿಗಳು ತಡವಾಗಿ ಆಗಮಿಸಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿರುವುದಾಗಿ ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next