Advertisement

ತನ್ನ ಜಮೀನಿನಲ್ಲೇ ರೈತನ ಮೃತದೇಹ ಪತ್ತೆ :ಕಾಡು ಪ್ರಾಣಿಗಳ ದಾಳಿ ಶಂಕೆ?

07:34 PM Jul 30, 2021 | Team Udayavani |

ಶ್ರೀರಂಗಪಟ್ಟಣ : ತನ್ನ ಜಮೀನಿನಲ್ಲೇ ರೈತನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಶ್ರೀರಂಗಪಟ್ಟಣ ತಾಲೂಕಿನ ನೆಲಮನೆ ಗ್ರಾಮದ ರೈತ ರಾಮೇಗೌಡ(65) ಮೃತ ದುರ್ದೈವಿ, ದೇಹದ ಅಂಗಾಗಗಳು ಹೊರಗೆ ಬಂದಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕಾಡು ಪ್ರಾಣಿಗಳ ದಾಳಿಗೆ ತುತ್ತಾಗಿರುವ ಸಂದೇಹ ವ್ಯಕ್ತಪಡಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಶ್ರೀರಂಗಪಟ್ಡಣ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾಡುಪ್ರಾಣಿಗಳ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next