Advertisement
ಬೆಂಗಳೂರಿನಲ್ಲಿ ಮಂಗಳವಾರ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಅವರು ಪತ್ರಿಕೆಯೊಂದಿಗೆ ಮಾತನಾಡಿ, ಕಾಯಿಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವುದಕ್ಕೆ ಸದ್ಯದಲ್ಲಿಯೇ ತೀರ್ಮಾನಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಅರಳಗೋಡು ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಸದ್ಯದಲ್ಲಿಯೇ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯ ಅನೇಕ ಭಾಗದಲ್ಲಿ ಮಂಗನ ಕಾಯಿಲೆಯು ಆವರಿಸುತ್ತಾ ಇದೆ. ಜನರು ಭಯಭೀತರಾಗಿ ಕೃಷಿ ಚಟುವಟಿಕೆಗಳನ್ನು ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಬಾರಿ ಕಾಯಿಲೆಯು ಭೀಕರ ಸ್ವರೂಪವನ್ನು ಪಡೆದಿದ್ದು 9 ಜನರನ್ನು ಬಲಿ ತೆಗೆದುಕೊಂಡಿದೆ. ಕಾಯಿಲೆಯ ಮುಂಜಾಗ್ರತಾ ಕ್ರಮವಾಗಿ ಕೊಡಬೇಕಾದ ಲಸಿಕೆ ಹಾಗೂ ಡಿಎಂಪಿ ಆಯಿಲ್ ಸರಬರಾಜು ಕೊರತೆಯಿಂದ ಜನರಿಗೆ ನೀಡಲು ಸಾಧ್ಯವಾಗುತ್ತಿಲ್ಲ ಎನ್ನುವುದರ ಬಗ್ಗೆ ಕಾಗೋಡು ಮುಖ್ಯಮಂತ್ರಿಗಳ ಗಮನ ಸೆಳೆದರು.
Advertisement
ಕೆಎಫ್ಡಿ ಸಂಶೋಧನೆಗೆ ಸಮಿತಿ ರಚನೆ
08:49 AM Jan 30, 2019 | |
Advertisement
Udayavani is now on Telegram. Click here to join our channel and stay updated with the latest news.