Advertisement

ಉಳ್ಳಾಲ ದರ್ಗಾ ವಿವಾದ: ನೂತನ ಸಮಿತಿ ರಚನೆ ಕಾನೂನು ಬಾಹಿರ; ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್

11:42 AM Mar 10, 2023 | Team Udayavani |

ಮಂಗಳೂರು: ವಕ್ಫ್ ಆ್ಯಕ್ಟ್ ಉಲ್ಲಂಘಿಸಿ ಉಳ್ಳಾಲ ದರ್ಗಾ ದ ಹೊಸ ಆಡಳಿತ ಸಮಿತಿ ರಚನೆ ಮಾಡಲಾಗಿದೆ ಎಂದು ದರ್ಗಾ ಅಧ್ಯಕ್ಷ  ಅಬ್ದುಲ್ ರಶೀದ್ ಹೇಳಿದ್ದಾರೆ.

Advertisement

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಬಾಹಿರವಾಗಿ ಚುನಾವಣೆ ನಡೆದಿದೆ. ನ್ಯಾಯಾಲಯದಲ್ಲಿ ದಾವೆ ಇದ್ದರೂ ಅದು ಇತ್ಯರ್ಥ ಆಗುವ ಮೊದಲೇ ಚುನಾವಣೆ ನಡೆಸಲಾಗಿದೆ.

ಬೀಗ ಮುರಿದು ಕಚೇರಿಯ ಒಳಹೊಕ್ಕು ಸಭೆ ನಡೆಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸಿಲ್ಲ. ಎರಡು ಗುಂಪುಗಳ ಮೇಲಾಟ ದಿಂದ ದರ್ಗಾದಲ್ಲಿ ಕಾನೂನು ಬಾಹಿರವಾದ ಚುನಾವಣೆ ನಡೆದಿದೆ. ನಮ್ಮ ಆಡಳಿತ ಸಮಿತಿ ಇಂತಹ ಗುಂಪು, ಸಂಘಟನೆಗಳ ಪ್ರಭಾವಕ್ಕೆ ಒಳಗಾಗದೆ ಸೌಹಾರ್ದಯುತವಾಗಿ ಆಡಳಿತ ನಡೆಸುತ್ತಾ ಬಂದಿದೆ. ಈಗಿನ ಬೆಳವಣಿಗೆಗಳಿಂದ ಸಂಘರ್ಷದ ಸ್ಥಿತಿ ಉಂಟಾಗಿದೆ. ಇದರ ಹಿಂದೆ ವಕ್ಫ್ ರಾಜ್ಯಾಧ್ಯಕ್ಷ ಶಾಫಿ ಸ ಅದಿ ಅವರ ಒತ್ತಡ ಮತ್ತು ಕೆಲವು ಪ್ರಭಾವಿ ವ್ಯಕ್ತಿಗಳ ಷಡ್ಯಂತ್ರ ಇದೆ ಎಂದು ಹೇಳಿದರು.

ಖಜಾಂಚಿ ಯು.ಕೆ.ಇಲ್ಯಾಸ್, ಅರೆಬಿಕ್ ಟ್ರಸ್ಟ್ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ, ಸದಸ್ಯರಾದ ಫಾರೂಕ್ ಉಳ್ಳಾಲ್, ಕೆ.ಎನ್. ಮಹಮ್ಮದ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next