Advertisement

ಬೆಂಗಳೂರು: ಹಾಡುಹಗಲೇ ಕಚೇರಿ ಮುಂದೆ ಮಾಜಿ ಕಾರ್ಪೊರೇಟರ್ ಭೀಕರ ಹತ್ಯೆ

01:11 PM Jun 24, 2021 | Team Udayavani |

ಬೆಂಗಳೂರು: ನಗರದಲ್ಲಿ ಗುರುವಾರ ಬೆಳಗ್ಗೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆಯೊಬ್ಬರ ಹತ್ಯೆ ಮಾಡಲಾಗಿದೆ. ಕಚೇರಿ ಮುಂಭಾಗದಲ್ಲಿಯೇ ಮಾಜಿ ಕಾರ್ಪೊರೇಟರ್ ಹತ್ಯೆಯಿಂದ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ.

Advertisement

ಛಲವಾದಿಪಾಳ್ಯದ  ಫ್ಲವರ್ ಗಾರ್ಡನ್ ಎಂಬಲ್ಲಿ ಮಾಜಿ ಬಿಜೆಪಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ:‘ಯಾವ ಸಭೆಗೂ ನನ್ನನ್ನು ಕರೆಯಲ್ಲ’: ಎಂಎಲ್ ಸಿ ಭೋಜೇಗೌಡ ಏಕಾಂಗಿ ಪ್ರತಿಭಟನೆ

ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ, ರೇಖಾ ಅವರು ಕಚೇರಿಯ ಒಳಗಿದ್ದರು. ಅವರನ್ನು ಹೊರಗಡೆ ಕರೆದ ದುಷ್ಕರ್ಮಿಗಳು ಅವರು ಬರುತ್ತಿದ್ದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತೀವ್ರ ರಕ್ತಸ್ರಾವವಾಗಿ ನೆಲಕ್ಕೆ ಬಿದ್ದ ರೇಖಾ ಅವರನ್ನು ಅಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಆದರೆ ಅದಾಗಲೇ ರೇಖಾ ಕೊನೆಯುಸಿರೆಳಿದ್ದರು.

ರೇಖಾ ಅವರ ಪತಿ ಕದಿರೇಶ್ ರನ್ನು ಮುನೇಶ್ವರ ದೇವಸ್ಥಾನದ ಬಳಿ ಕೊಲೆ ಮಾಡಲಾಗಿತ್ತು.  ಇದೀಗ ಪತ್ನಿಯ ಕೊಲೆ ಮಾಡಲಾಗಿದೆ. ಟೆಂಡರ್ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next