Advertisement

“ರಾಜ್ಯದ ತೆಲುಗು ಭಾಷಿಕರು ಬಿಜೆಪಿ ಬೆಂಬಲಿಸಬೇಕು’

06:50 AM May 10, 2018 | |

ಬೆಂಗಳೂರು: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಕಾರಣ ಬಿಜೆಪಿ ಬೆಂಬಲಿಸಬೇಡಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಲಗು ಭಾಷಿಕರನ್ನು ಪ್ರಚೋದಿಸುವುದು ಸರಿಯಲ್ಲ. ಕೇಂದ್ರ ಸರಕಾರವು ಆಂಧ್ರ ಪ್ರದೇಶಕ್ಕೆ 70,000 ಕೋಟಿ ರೂ.ವಿಶೇಷ ಅನುದಾನ ನೀಡಿದ್ದು, ಪಕ್ಷವನ್ನು ಬೆಂಬಲಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಯು.ವಿ.ಕೃಷ್ಣಂರಾಜು ಹೇಳಿದರು. 

Advertisement

ನಗರದಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಜಗತ್ತಿನಾದ್ಯಂತ ಹಾಗೂ ಭಾರತದಲ್ಲಿ ಪ್ರಧಾನಿ ಮೋದಿ ಪರ ಅಲೆ ಇದೆ. ದೇಶದ ಅಭಿವೃದ್ಧಿಗೆ ಬಿಜೆಪಿ ಶ್ರಮಿಸುತ್ತಿದೆ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಒಂದೇ ಸರಕಾರವಿದ್ದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯವಾಗಲಿದೆ. ಆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿನ ತೆಲುಗು ಭಾಷಿಕರು ಪಕ್ಷವನ್ನು ಬೆಂಬಲಿಸಬೇಕು ಎಂದು ಕೋರಿದರು.

Advertisement

Udayavani is now on Telegram. Click here to join our channel and stay updated with the latest news.

Next