Advertisement

Surgery ಬಳಿಕ ಮಾಜಿ ಸಿಎಂ ಬೊಮ್ಮಾಯಿ ಮತ್ತೆ ಸಕ್ರಿಯ

08:29 PM Dec 18, 2023 | Team Udayavani |

ಬೆಂಗಳೂರು: ಸುಮಾರು ಎರಡು ತಿಂಗಳ ನಂತರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವಕ್ಷೇತ್ರ ಶಿಗ್ಗಾಂವಿಗೆ ಭೇಟಿ ನೀಡಲಿದ್ದು, ಕ್ಷೇತ್ರದ ಜನರ ಭೇಟಿಗೆ ಸಮಯ ಮೀಸಲಿಡಲಿದ್ದಾರೆ.

Advertisement

ಸೋಮವಾರ ರಾತ್ರಿ ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿ ತಲುಪಿ, ಅಲ್ಲೇ ವಾಸ್ತವ್ಯ ಹೂಡಿ ವಿಶ್ರಾಂತಿ ಪಡೆದರು. ಅಕ್ಟೋಬರ್‌ ತಿಂಗಳಲ್ಲಿ ಶಿಗ್ಗಾಂವಿಗೆ ಭೇಟಿ ನೀಡಿದ್ದ ಬಸವರಾಜ ಬೊಮ್ಮಾಯಿ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಬಳಿಕ ಇದೇ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಮಂಗಳವಾರ ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು 11 ಗಂಟೆಗೆ ಶಿಗ್ಗಾಂವಿ ತಲುಪಿ ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ಮಧ್ಯಾಹ್ನ 2.15ಕ್ಕೆ ಶಿಗ್ಗಾಂವಿಯಿಂದ ಹೊರಟು ಹುಬ್ಬಳ್ಳಿ ತಲುಪಲಿದ್ದಾರೆ. ವಿಶ್ರಾಂತಿ ಪಡೆದು, ಬುಧವಾರ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಗುರುವಾರ ಬೆಂಗಳೂರಿಗೆ ಮರಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next