Advertisement

ದೂಷಣೆ ಬಿಟ್ಟು 10 ಕೆ.ಜಿ. ಅಕ್ಕಿ ಕೊಡಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

11:02 PM Jun 18, 2023 | Shreeram Nayak |

ಶಿವಮೊಗ್ಗ: ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್‌ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ. ಈಗಾಗಲೇ ಕೇಂದ್ರ ಸರಕಾರ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರಕಾರದ ಜವಾಬ್ದಾರಿ. ಎಲ್ಲಿಂದಾದರೂ ಖರೀದಿಸಿಕೊಡಲಿ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಭರವಸೆ ನೀಡಿದಂತೆ 10 ಕೆ.ಜಿ. ಅಕ್ಕಿ ನೀಡಬೇಕು. ಈ ವಿಚಾರದಲ್ಲಿ ಕೇಂದ್ರ ಸರಕಾರವನ್ನು ಅನಗತ್ಯವಾಗಿ ದೂಷಿಸುವುದು ಸರಿಯಲ್ಲ. ಯಾವುದೇ ಸಮಯದಲ್ಲೂ ಮೋದಿ ಹೆಚ್ಚುವರಿ ಅಕ್ಕಿ ಕೊಡುತ್ತೇವೆ ಎಂದು ಹೇಳಿಲ್ಲ. ಆದರೆ ಸಿದ್ದರಾಮಯ್ಯ, ಡಿಕೆಶಿ ವಿನಾಕಾರಣ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದರು.

ಶೀಘ್ರ ವಿಪಕ್ಷ ನಾಯಕನ ಆಯ್ಕೆ
ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ. ಈ ಬಗ್ಗೆ ವರಿಷ್ಠರು ಕ್ರಮ ಕೈಗೊಳ್ಳಲಿದ್ದಾರೆ. ಅದರಲ್ಲಿ ವಿಶೇಷ ಏನೂ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next