Advertisement

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕಾಫಿನಾಡಿಗೆ ಭೇಟಿ

08:31 AM Aug 19, 2022 | Team Udayavani |

ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಶೃಂಗೇರಿ ಹಾಗೂ ಮೂಡಿಗೆರೆ ಕ್ಷೇತ್ರಕ್ಕೆ ಪ್ರವಾಸ ಕೈಗೊಂಡಿದ್ದಾರೆ. ತಡರಾತ್ರಿಯೇ ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿರುವ ಸಿದ್ದರಾಮಯ್ಯ ಬೆಳಿಗ್ಗೆ ಶೃಂಗೇರಿ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನದ ಬಳಿಕ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಭಾಗಿಯಾಗಲಿದ್ದಾರೆ.

Advertisement

ಬೆಳಿಗ್ಗೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ. ಡಿ. ರಾಜೇಗೌಡ ನಿವಾಸದಲ್ಲಿ ಬೆಳಗಿನ ಉಪಹಾರ ಮುಗಿಸಿ ಬಳಿಕ ಶೃಂಗೇರಿ ಕ್ಷೇತ್ರದ ಬಾಳೆಹೊನ್ನೂರು, ಕೊಪ್ಪ, ಶೃಂಗೇರಿ ತಾಲ್ಲೂಕಿನ  ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ನಂತರ ಶೃಂಗೇರಿಯಿಂದ ಮೂಡಿಗೆರೆ ಕ್ಷೇತ್ರಕ್ಕೆ ಪ್ರಯಾಣಿಸಲಿದ್ದಾರೆ. ಮೂಡಿಗೆರೆ ಕ್ಷೇತ್ರದ ಹಿರೇಬೈಲು, ಕಳಸ, ಕೊಟ್ಟಿಗೆಹಾರಕ್ಕೆ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಮರಬಿದ್ದು ಇಬ್ಬರು ಮೃತಪಟ್ಟ ಕೊವೆ ಗ್ರಾಮಕ್ಕೆ ಭೇಟಿ ನೀಡಿ ಬಳಿಕ ಮೂಡಿಗೆರೆ ಐಬಿಯಲ್ಲಿ ಬೆಳೆಗಾಗರರೊಂದಿಗೆ ಸಭೆ ನಡೆಸಿ, ಬಳಿಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ನಿನ್ನೆ ಮಡಿಕೇರಿ ಘಟನೆ ಬಳಿಕ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next