Advertisement

ಮಾಜಿ ಸಿಎಂ ಸಿದ್ದುಗೆ ಸೋಮಣ್ಣ ತಿರುಗೇಟು

10:31 PM Nov 02, 2019 | Team Udayavani |

ಮೈಸೂರು: ಕೈಲಾಗದವರು ಮೈ ಪರಚಿಕೊಂಡರು ಎಂಬಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿರುಗೇಟು ನೀಡಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ನೂರು ದಿನದ ಸಾಧನೆ ಶೂನ್ಯ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೂರು ದಿನದಲ್ಲಿ ಏನು ಮಾಡಿದ್ದರು ಎಂದು ಪ್ರಶ್ನಿಸಿದರು. ಅವರ ಕಾಲದಲ್ಲಿ ರಾಜ್ಯದಲ್ಲಿ ಬರಗಾಲ ಆವರಿಸಿತ್ತು.

Advertisement

ಯಡಿಯೂರಪ್ಪನವರ ಕಾಲದಲ್ಲಿ ರಾಜ್ಯ ಸುಭಿಕ್ಷ ಕಾಲವಾಗಿದೆ. ಪ್ರವಾಹದಿಂದ ಕೆಲವೆಡೆ ತೊಂದರೆಯಾಗಿದ್ದರೂ, ಒಂದೆರಡು ತಿಂಗಳಲ್ಲಿ ಸರಿಪಡಿಸಿ ಅವರನ್ನೂ ಮುಖ್ಯವಾಹಿನಿಗೆ ತರುವ ಮೂಲಕ ಜನ ಮೆಚ್ಚುವ ಕೆಲಸ ಮಾಡುತ್ತೇವೆ ಎಂದರು. ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ. ಅವರ ಕಾಲದಲ್ಲಿ ಏನಾಗಿತ್ತು ಅನ್ನುವುದನ್ನೂ ತೆಗೀಲಿ ಎಂದು ಸವಾಲು ಹಾಕಿದರು. “ನಾನು ಇದುವರೆಗೂ ಒಂದೇ ಒಂದು ವರ್ಗಾವಣೆ ಪತ್ರಕ್ಕೆ ಸಹಿ ಹಾಕಿಲ್ಲ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next