Advertisement

ಮಾಜಿ ಶಾಸಕರ ಮೊಮ್ಮಗನನ್ನು ಥಳಿಸಿ ಹತ್ಯೆಗೈದ ಗುಂಪು

09:15 AM Jan 09, 2023 | Team Udayavani |

ಲಕ್ನೋ: ಮಾಜಿ ಶಾಸಕರೊಬ್ಬರ ಮೊಮ್ಮಗನನ್ನು ಆಕ್ರೋಶಿತ ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಮಹೂರ್ ಗ್ರಾಮದಲ್ಲಿ ನಡೆದಿದೆ.

Advertisement

ಹಿಮಾಂಶು ಸಿಂಗ್ (35) ಮೃತ ವ್ಯಕ್ತಿ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಹಿಮಾಂಶು ಸಿಂಗ್ 1980 ರಲ್ಲಿ ಘೋಸಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ದಿವಂಗತ ಕೇದಾರ್ ಸಿಂಗ್ ಅವರ ಮೊಮ್ಮಗ ಎಂದು ಪೊಲೀಸರು ಹೇಳಿದ್ದಾರೆ.

ಹಿಮಾಂಶು ಸಿಂಗ್ ಶನಿವಾರ ರಾತ್ರಿ ಕೋಪಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಲೈರೊ ಡೊನ್ವಾರ್ ಗ್ರಾಮದಲ್ಲಿ ಪಂಚಾಯಿತಿಗೆ ಹೋಗಿದ್ದರು. ಅಲ್ಲಿ ಕೆಲ ಜನರೊಂದಿಗೆ ವಾಗ್ವಾದ ನಡೆದಿದೆ. ಇದೇ ವಾಗ್ವಾದ ಹೆಚ್ಚಾಗಿ, ಆಕ್ರೋಶಿತ ಗುಂಪಿನ ಏಳೆಂಟು ಜನ ಹಿಮಾಂಶು ಅವರ ಮೇಲೆ ಹಲ್ಲೆ ಮಾಡಿ, ಕೋಲಿನಿಂದ ಥಳಿಸಿದ್ದಾರೆ. ಅರೆ ಪ್ರಜ್ಞಾಸ್ಥಿತಿಯಲ್ಲಿ ಬಿದ್ದ ಹಿಮಾಂಶು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಅಲ್ಲಿ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸಲಾಗುತ್ತಿದ್ದು, ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next