Advertisement

Politics: ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಲೆಂದು ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಹಾರೈಕೆ

11:08 PM Jan 16, 2024 | Team Udayavani |

ಬೆಂಗಳೂರು: “ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಅವರು ಮುಖ್ಯಮಂತ್ರಿ ಆಗಲಿ’ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಶುಭ ಹಾರೈಸುವ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿದರು.

Advertisement

ನಗರದ ಶಿರೂರ್‌ ಪಾರ್ಕ್‌ನಲ್ಲಿ ಮಂಗಳವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ರಾಜಕೀಯ ಎದುರಾಳಿಯೇ ಆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

ಈ ವೇಳೆ ಮಾತನಾಡಿದ ಡಾ.ಅಶ್ವತ್ಥನಾರಾಯಣ, ಜನರನ್ನು ನೇರವಾಗಿ ತಲುಪುವ ಕೆಲಸವನ್ನು ಡಿ.ಕೆ.ಶಿವಕುಮಾರ್‌ ಮಾಡುತ್ತಿದ್ದಾರೆ. ಅವರಿಗೆ ಈಗ ಡಿಸಿಎಂ ಸ್ಥಾನ ಕೊಟ್ಟಿದ್ದಾರೆ. ಇನ್ನಷ್ಟು ಎತ್ತರಕ್ಕೆ ಬೆಳೆಯಲಿ. ಮುಂದಿನ ದಿನಗಳಲ್ಲಿ ಉನ್ನತ ಮಟ್ಟಕ್ಕೆ ಹೋಗಿ ಮುಖ್ಯಮಂತ್ರಿ ಕೂಡ ಆಗಲಿ ಎಂದು ಶುಭ ಹಾರೈಸಿದರು.

Advertisement

Udayavani is now on Telegram. Click here to join our channel and stay updated with the latest news.

Next