Advertisement

ಇನ್ನೂ ಹಂಗಿನಲ್ಲಿ ಇದ್ದೇನೆ, ಅದರಿಂದ ಹೊರಬರಬೇಕು: ಲಕ್ಷ್ಮಣ ಸವದಿ

10:58 AM Apr 14, 2023 | Team Udayavani |

ಬೆಳಗಾವಿ: ವಿಧಾನ ಪರಿಷತ್ ಸ್ಥಾನ ಪಕ್ಷಕ್ಕೆ ರಾಜೀನಾಮೆ ಕೊಡಬೇಕು. ಇನ್ನೂ ಹಂಗಿನಲ್ಲಿ ಇದ್ದೇನೆ, ಅದರಿಂದ ಹೊರಬರಬೇಕು. ಬಳಿಕ ಏನು ಮಾಡಬೇಕೆಂಬ ತೀರ್ಮಾನ ಮಾಡುತ್ತೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಹೋಗಿ ಸಾಧಕ, ಬಾಧಕ ಚರ್ಚೆ ಮಾಡುತ್ತೇನೆ. ಬಳಿಕ ಒಂದು ನಿರ್ಣಯ ಮಾಡುತ್ತೇನೆ. ಕಾಂಗ್ರೆಸ್, ಜೆಡಿಎಸ್ ನಿಂದ ಆಹ್ವಾನವಿದೆ, ಸಂಜೆ ತೀರ್ಮಾನಕ್ಕೆ ಬರುತ್ತೇನೆ. ಏಪ್ರಿಲ್ 17 ಇಲ್ಲವೇ 18 ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಕ್ಷೇತ್ರದ ಜನರ ಒಪ್ಪಿಗೆ ಪಡೆದಿದ್ದೇನೆ. ಖಾಸಗಿಯಾಗೂ ಅನೇಕರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ ಎಂದರು.

ಮನೆ ಬಿಟ್ಟು ಹೊರಗೆ ಬಂದ ಮೇಲೆ ಸಂಪರ್ಕ ಮಾಡಿದರೇನು, ಬಿಟ್ಟರೇನು. ನನ್ನ ಸಂಪರ್ಕಕ್ಕೆ ಬಿ ಎಲ್ ಸಂತೋಷ ಬಹಳ ಪ್ರಯತ್ನ ಪಟ್ಟರು. ಕೆಲ ಮುಖಂಡರನ್ನು ಸಹ ಕಳಸಿದರು. ಆಜ್ಞೆಯನ್ನು ಪಾಲಿಸುವುದು ಕಷ್ಟ, ಬಿಡುವುದು ಕಷ್ಟ ಸಂತೋಷ ಅವರು ನನ್ನ ಗುರು, ನನ್ನನ್ನು ಕ್ಷಮಿಸಿ ಎಂದು ಹೇಳುತ್ತೇನೆ. ಅವರಿಂದ ಯಾವುದೇ ಅನ್ಯಾಯವಾಗಿಲ್ಲ, ಕಷ್ಟ ಕಾಲದಲ್ಲಿ ನೆರವು ಕೊಟ್ಟಿದ್ದಾರೆ ಎಂದು ಸವದಿ ಹೇಳಿದರು.

ಅಥಣಿಯ ಕೆಲ ಪ್ರದೇಶ ನೀರಾವರಿಯಿಂದ ವಂಚಿತಗೊಂಡಿದೆ. ನೀರಾವರಿ ಸೌಲಭ್ಯ ಕಲ್ಪಿಸಬೇಕು ಎನ್ನುವುದು. ಆಸೆ ವೈಯಕ್ತಿಕ ಬೇಡಿಕೆ ಅಲ್ಲ, ನೀರಾವರಿ ಬೇಡಿಕೆ ಇಡುತ್ತೇನೆ ಎಂದು ಸವದಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next