Advertisement

ನ್ಯಾ.ರಾಜೇಂದ್ರ ಸಾಚಾರ್‌ ನಿಧನ

06:00 AM Apr 21, 2018 | Team Udayavani |

ನವದೆಹಲಿ: ದೆಹಲಿ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಸಾಚಾರ್‌ (94) ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯದ ನಿಮಿತ್ತ ಗುರುವಾರ ಅವರನ್ನು ನವದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು 1985 ಆ.6 ರಿಂದ ಅದೇ ವರ್ಷದ ಡಿ.22ರ ವರೆಗೆ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. 

Advertisement

2005ರಲ್ಲಿ ಯುಪಿಎ ಸರ್ಕಾರ ದೇಶದಲ್ಲಿ ಮುಸ್ಲಿಂ  ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯಲು ನೇಮಿಸಿದ್ದ ಸಮಿತಿ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದರು. ಜತೆಗೆ ನಾಗರಿಕ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next