Advertisement

ಹರಿಯಾಣದ ಹಿಸಾರ್‌ನಲ್ಲಿ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಕಾರು ಅಪಘಾತ

05:29 PM Apr 09, 2023 | Team Udayavani |

ಹರಿಯಾಣ : ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಪ್ರಯಾಣಿಸುತ್ತಿದ್ದ ಕಾರು ಭಾನುವಾರ ಹಿಸಾರ್‌ನಲ್ಲಿ ಅಪಘಾತಕ್ಕೀಡಾಗಿದೆ.

Advertisement

ಹರಿಯಾಣದ ಹಿಸಾರ್ ಜಿಲ್ಲೆಯ ಬರ್ವಾಲಾ ಬಳಿ ಸಾಗುತ್ತಿದ್ದಾಗ ಅವರ ಎಸ್‌ಯುವಿ ಕಾರಿಗೆ ಕಾಡು ಪ್ರಾಣಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಸೇರಿದಂತೆ ವಾಹನದಲ್ಲಿದ್ದ ಇತರ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಹಿಸಾರ್ ನ ಗಿರಾಯೇ ಪ್ರದೇಶದಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಕಾಡು ಪ್ರಾಣಿ ಡಿಕ್ಕಿ ಹೊಡೆದಿದೆ ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಬೇರೆ ವಾಹನದಲ್ಲಿ ಕಾರ್ಯಕ್ರಮಕ್ಕೆ ತೆರಳಿದರು.

ಇದನ್ನೂ ಓದಿ: ಪ್ರಧಾನಿ Modi ಸಂಚಾರ; ಬಂದ್ ಆಗಿದ್ದ ಮೈಸೂರಿನ ಪ್ರಮುಖ ರಸ್ತೆಗಳು

Advertisement
Advertisement

Udayavani is now on Telegram. Click here to join our channel and stay updated with the latest news.

Next