Advertisement

ಶೀಘ್ರವೇ ಕೇರಳದ ಮಾಜಿ ಸಿಎಂ ಉಮ್ಮನ್‌ ಚಾಂಡಿ ಬೆಂಗಳೂರಿಗೆ ಶಿಫ್ಟ್

12:26 AM Feb 12, 2023 | Team Udayavani |

ತಿರುವನಂತಪುರ: ನ್ಯುಮೋನಿಯಾದಿಂದ ಬಳಲುತ್ತಿರುವ ಕೇರಳದ ಮಾಜಿ ಸಿಎಂ ಉಮ್ಮನ್‌ ಚಾಂಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡುವುದಾಗಿ ಎಐಸಿಸಿ ಸಂಘಟನ ಪ್ರಧಾನ ಕಾರ್ಯ­ದರ್ಶಿ ಕೆ.ಸಿ.ವೇಣುಗೋಪಾಲ್‌ ಹೇಳಿದ್ದಾರೆ.

Advertisement

ನೆಯ್ಯತ್ತಿಂಕಾ­ರಾದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಚಾಂಡಿ ಅವರ ಆರೋಗ್ಯ ವಿಚಾರಿಸಿದ ಬಳಿಕ ಶನಿವಾರ ವೇಣುಗೋಪಾಲ್‌ ಈ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಚಾಂಡಿ ಅವರು ನ್ಯುಮೋನಿಯಾದಿಂದ ಗುಣಮುಖರಾಗಿ­ದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಆದರೂ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲು ನಿರ್ಧರಿಸಿದ್ದೇವೆ. ಅವರ ಪ್ರಯಾಣ ಮತ್ತು ಚಿಕಿತ್ಸೆಯ ಹೊಣೆಯನ್ನು ಎಐಸಿಸಿ ವಹಿಸಿಕೊಳ್ಳಲಿದೆ ಎಂದೂ ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next