Advertisement

ಕೋವಿಡ್ ಸೋಂಕಿಗೆ ಕುಂದಾಪುರದ ಮಾಜಿ ಕ್ರೀಡಾಪಟು ಕುವೈಟ್ ನಲ್ಲಿ ಬಲಿ

02:52 PM Jul 17, 2020 | keerthan |

ಕುಂದಾಪುರ: ಇಲ್ಲಿನ ಭಂಡಾರ್ ಕಾರ್ಸ್ ಕಾಲೇಜಿನ ಮಾಜಿ ಅಥ್ಲೆಟಿಕ್ಸ್ ಚಾಂಪಿಯನ್, ಖ್ಯಾತ ಕಬಡ್ಡಿ ಮತ್ತು ವಾಲಿಬಾಲ್ ಆಟಗಾರ ಕುಂದಾಪುರ ಖಾರ್ವಿ ಕೇರಿ ನಿವಾಸಿಯೊಬ್ಬರು ಕುವೈಟ್ ನಲ್ಲಿ ಜು.16ರಂದು ನಿಧನರಾಗಿದ್ದಾರೆ.

Advertisement

ಕುವೈಟ್ ನ ಕೆ.ಆರ್. ಎಚ್. ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಇವರು ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೀಡಾಗಿ ತಪಾಸಣೆ ನಡೆಸಿದಾಗ ಕೋವಿಡ್ ಸೋಂಕು ತಗಲಿರುವುದು ದೃಢ ಪಟ್ಟಿತೆನ್ನಲಾಗಿದೆ. ಕಳೆದ ಸುಮಾರು 22 ದಿನಗಳಿಂದಲೂ ಕುವೈಟ್ ನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಮೃತ ದೇಹದ ಅಂತಿಮ ಕಾರ್ಯವನ್ನು ಕುವೈಟ್ ನಲ್ಲಿಯೇ ನಡೆಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

80ರ ದಶಕದಲ್ಲಿ ಕುಂದಾಪುರದ ಖ್ಯಾತ ಕ್ರೀಡಾಪಟುವಾಗಿ ಮಿಂಚಿದ ಇವರು ಯುವ ಆಟಗಾರರಿಗೆ ತರಬೇತುದಾರರಾಗಿಯೂ ಸೇವೆ ಸಲ್ಲಿಸಿದ್ದರು. ಯು.ಎ. ಇ ಯಲ್ಲಿ ಹಲವು ವರ್ಷಗಳಿಂದ ಉದ್ಯೋಗದಲ್ಲಿದ್ದ ಇವರು ಕೆಲವು ವರ್ಷಗಳ ಹಿಂದೆ ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದರು.

ಇವರು ಪತ್ನಿ, ಮೂವರು ಪುತ್ರಿಯರು, ತಾಯಿ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ. ಇವರ ಅಗಲಿಕೆಗೆ ಹಲವರಿಂದ ಸಂತಾಪ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next