Advertisement

ಮಾಜಿ ಸಚಿವ ಚಿದಂಬರಂ ಏಮ್ಸ್‌ ಆಸ್ಪತ್ರೆಗೆ ದಾಖಲು

10:28 AM Oct 06, 2019 | Sriram |

ನವದೆಹಲಿ: ಐಎನ್‌ಎಕ್ಸ್‌ ಮೀಡಿಯಾ ಹಗರಣದಲ್ಲಿ ವಿಚಾರಣಾಧೀನ ಕೈದಿಯಾಗಿ ತಿಹಾರ್‌ ಜೈಲು ಸೇರಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಶನಿವಾರ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಏಮ್ಸ್‌ಗೆ ಕರೆದೊಯ್ಯಲಾಯಿತು. ಸಾಮಾನ್ಯವಾಗಿ ತಿಹಾರ್‌ ಜೈಲಿನ ಕೈದಿಗಳಿಗೆ ಅನಾರೋಗ್ಯವಾದಾಗ ಅವರನ್ನು ದೀನದಯಾಳ್‌ ಉಪಾಧ್ಯಾಯ್‌ ಆಸ್ಪತ್ರೆಗೆ ಕರೆದೊಯ್ಯುವುದು ವಾಡಿಕೆ. ಆದರೆ, ಚಿದಂಬರಂ ಅವರಿಗೆ ಅನಾರೋಗ್ಯವಾದಲ್ಲಿ ಅವರನ್ನು ಏಮ್ಸ್‌ ಅಥವಾ ರಾಮ ಮನೋಹರ ಲೋಹಿಯಾ (ಆರ್‌ಎಂಎಲ್‌) ಆಸ್ಪತ್ರೆಗೆ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿರುವುದರಿಂದ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬುಧವಾರವಷ್ಟೇ, ಸಿಬಿಐ ವಿಶೇಷ ನ್ಯಾಯಾಲಯ, ಚಿದಂಬರಂ ಅವರ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next